ರಾಜ್ಯ

ವಿಜಯಲಕ್ಷ್ಮೀ ಮನೆಯಲ್ಲಿ 3 ಲಕ್ಷ ಕಳ್ಳತನ ಪ್ರಕರಣ: ಮನೆ ಕೆಲಸದವರ ವಿಚಾರಣೆ

ಬೆಂಗಳೂರು: ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಮೂರು ಲಕ್ಷ ನಗದು ಕಳ್ಳತನವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಜಯಲಕ್ಷ್ಮೀ ಮನೆ ಕೆಲಸದವರನ್ನು ವಿಚಾರಣೆ ನಡೆಸಿದ್ದಾರೆ.

ಪೊಲೀಸರ ವಿಚಾರಣೆ ವೇಳೆ ಮನೆ ಕೆಲಸದವರು ನಾವು ಹಣ ಕದ್ದಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಕಳ್ಳತನವಾದ ದಿನ ಫ್ಲಾಟ್‌ನಲ್ಲಿ ವಿಜಯಲಕ್ಷ್ಮೀ ತಾಯಿ ಸೇರಿ ಐವರಿದ್ದರು. ಫ್ಲಾಟ್‌ ಒಳಗೆ ಸಿಸಿ ಕ್ಯಾಮರಾ ಇರಲಿಲ್ಲ. ಆದರೆ ಗಾರ್ಡನ್‌ ಏರಿಯಾ ಬಳಿ ಸೆಕ್ಯೂರಿಟಿ, ಲಿಫ್ಟ್ ಬಳಿ ಮಾತ್ರ ಸಿಸಿ ಕ್ಯಾಮರಾ ಇತ್ತು.

ಇದನ್ನು ಓದಿ : ಬಳ್ಳಾರಿ ಜೈಲಿಗೆ ನಟ ದರ್ಶನ್‌ : ಆದೇಶ ಕಾಯ್ದಿರಿಸಿದ ಕೋರ್ಟ್‌

ಇದನ್ನು ಪರಿಶೀಲನೆ ನಡೆಸಿದಾಗ ಮನೆ ಒಳಗೆ ಯಾರೂ ಇರಲಿಲ್ಲ. ಆದರೆ ಮನೆಕೆಲಸದವರು ನಾವು ಕದ್ದಿಲ್ಲ ಎಂದು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಜಯಲಕ್ಷ್ಮೀ ತಾಯಿಯಿಂದ ಮಾಹಿತಿ ಪಡೆಯಲಿದ್ದಾರೆ.

ಇನ್ನು ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ ಮೂರು ಲಕ್ಷ ನಗದು ಕಳ್ಳತನವಾಗಿದ್ದು, ದೂರು ದಾಖಲಾಗಿದೆ. ಪ್ರಕರಣ ಸಂಬಂಧ ದರ್ಶನ್‌ ಮ್ಯಾನೇಜರ್‌ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ದೂರು ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

42 mins ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

2 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

3 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

5 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

8 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

8 hours ago