Mysore
20
clear sky

Social Media

ಸೋಮವಾರ, 02 ಫೆಬ್ರವರಿ 2026
Light
Dark

ಡೆಂಗ್ಯೂಗೆ ನಿಖರವಾದ ಚಿಕಿತ್ಸೆ ಅನ್ನೋದು ಇಲ್ಲ : ಡಾ. ಮಂಜುನಾಥ್‌

ಬೆಂಗಳೂರು : ಡೆಂಗ್ಯೂ ಪ್ರಕರಣಗಳು ಗಂಭೀರ ಹಂತಕ್ಕೆ ಹೋದಾಗ ಅದಕ್ಕೆ ಚಿಕಿತ್ಸೆ ಇಲ್ಲ. ಏನೇನೋ ಫ್ರೀ ಕೊಡುವ ಬದಲು ಸ್ಲಂ ವಠಾರಗಳಲ್ಲಿ ವಾಸ ಮಾಡುವವರಿಗೆ ಸೊಳ್ಳೆ ಪರದೆಗಳನ್ನ ಉಚಿತವಾಗಿ ಕೊಡಬೇಕು ಎಂದು ಸಂಸದ ಡಾ.ಮಂಜುನಾಥ್‌ ಹೇಳಿದರು.

ಬಿಜೆಪಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡೆಂಗ್ಯೂಗೆ ನಿಖರವಾದ ಚಿಕಿತ್ಸೆ ಅನ್ನೋದು ಇಲ್ಲ ಇದರ ಜೊತೆಗೆ ಇತರ ಕಾಯಿಲೆಗಳು ಬರುತ್ತವೆ. ಕೋವಿಡ್‌ ಅನ್ನು ಪ್ಯಾಂಡಮಿಕ್‌ ಕಾಯಿಲೆ ಎಂದೆವು. ಇದು ಎಂಡಮೆಕ್‌ ಕಾಯಿಲೆ. ಕೋವಿಡ್‌ ಮಾದರಿಯಲ್ಲಿ ಇದಕ್ಕೆ ಚಿಕಿತ್ಸೆ ನೀಡಬೇಕು. ಮೆಡಿಕಲ್‌ ಎಮರ್ಜೆನ್ಸಿ ಅಂತಾ ಘೋಷಣೆ ಮಾಡಬೇಕು ಎಂದರು.

ಈ ರೋಗಗಳ ಪತ್ತೆಗೆ  ಹೆಚ್ಚು ದರ ತೆಗೆದುಕೊಳ್ಳುವ ಲ್ಯಾಬ್‌ ಗಳ  ಬಾಗಿಲು ಮುಚ್ಚಬೇಕು. ಸೊಳ್ಳೆ ನಿಯಂತ್ರಣ ಮಾಡಬೇಕು. ಆರೋಗ್ಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಕೆಲಸ ಮಾಡಬೇಕು.ಜೊತೆಗೆ ಟಾಸ್ಕ್‌ ಫೋರ್ಸ್‌ ರಚನೆ ಮಾಡಬೇಕು. ಡೆಂಗ್ಯೂ ಹರಡುವಿಕೆ ಪತ್ತೆ ಹಚ್ಚುವ ಕೆಲಸ ಆಗಬೇಕು ಎಂದು ತಿಳಿಸಿದರು.

 

Tags:
error: Content is protected !!