ಬೆಂಗಳೂರು : ಡೆಂಗ್ಯೂ ಪ್ರಕರಣಗಳು ಗಂಭೀರ ಹಂತಕ್ಕೆ ಹೋದಾಗ ಅದಕ್ಕೆ ಚಿಕಿತ್ಸೆ ಇಲ್ಲ. ಏನೇನೋ ಫ್ರೀ ಕೊಡುವ ಬದಲು ಸ್ಲಂ ವಠಾರಗಳಲ್ಲಿ ವಾಸ ಮಾಡುವವರಿಗೆ ಸೊಳ್ಳೆ ಪರದೆಗಳನ್ನ ಉಚಿತವಾಗಿ ಕೊಡಬೇಕು ಎಂದು ಸಂಸದ ಡಾ.ಮಂಜುನಾಥ್ ಹೇಳಿದರು.
ಬಿಜೆಪಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡೆಂಗ್ಯೂಗೆ ನಿಖರವಾದ ಚಿಕಿತ್ಸೆ ಅನ್ನೋದು ಇಲ್ಲ ಇದರ ಜೊತೆಗೆ ಇತರ ಕಾಯಿಲೆಗಳು ಬರುತ್ತವೆ. ಕೋವಿಡ್ ಅನ್ನು ಪ್ಯಾಂಡಮಿಕ್ ಕಾಯಿಲೆ ಎಂದೆವು. ಇದು ಎಂಡಮೆಕ್ ಕಾಯಿಲೆ. ಕೋವಿಡ್ ಮಾದರಿಯಲ್ಲಿ ಇದಕ್ಕೆ ಚಿಕಿತ್ಸೆ ನೀಡಬೇಕು. ಮೆಡಿಕಲ್ ಎಮರ್ಜೆನ್ಸಿ ಅಂತಾ ಘೋಷಣೆ ಮಾಡಬೇಕು ಎಂದರು.
ಈ ರೋಗಗಳ ಪತ್ತೆಗೆ ಹೆಚ್ಚು ದರ ತೆಗೆದುಕೊಳ್ಳುವ ಲ್ಯಾಬ್ ಗಳ ಬಾಗಿಲು ಮುಚ್ಚಬೇಕು. ಸೊಳ್ಳೆ ನಿಯಂತ್ರಣ ಮಾಡಬೇಕು. ಆರೋಗ್ಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಕೆಲಸ ಮಾಡಬೇಕು.ಜೊತೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಡೆಂಗ್ಯೂ ಹರಡುವಿಕೆ ಪತ್ತೆ ಹಚ್ಚುವ ಕೆಲಸ ಆಗಬೇಕು ಎಂದು ತಿಳಿಸಿದರು.
ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…
ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…
ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ ೨೭೫ರ ವಿಸ್ತೃತ ಮಾರ್ಗವಾದ…
ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…
ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…