ಬೆಂಗಳೂರು : ಡೆಂಗ್ಯೂ ಪ್ರಕರಣಗಳು ಗಂಭೀರ ಹಂತಕ್ಕೆ ಹೋದಾಗ ಅದಕ್ಕೆ ಚಿಕಿತ್ಸೆ ಇಲ್ಲ. ಏನೇನೋ ಫ್ರೀ ಕೊಡುವ ಬದಲು ಸ್ಲಂ ವಠಾರಗಳಲ್ಲಿ ವಾಸ ಮಾಡುವವರಿಗೆ ಸೊಳ್ಳೆ ಪರದೆಗಳನ್ನ ಉಚಿತವಾಗಿ ಕೊಡಬೇಕು ಎಂದು ಸಂಸದ ಡಾ.ಮಂಜುನಾಥ್ ಹೇಳಿದರು.
ಬಿಜೆಪಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡೆಂಗ್ಯೂಗೆ ನಿಖರವಾದ ಚಿಕಿತ್ಸೆ ಅನ್ನೋದು ಇಲ್ಲ ಇದರ ಜೊತೆಗೆ ಇತರ ಕಾಯಿಲೆಗಳು ಬರುತ್ತವೆ. ಕೋವಿಡ್ ಅನ್ನು ಪ್ಯಾಂಡಮಿಕ್ ಕಾಯಿಲೆ ಎಂದೆವು. ಇದು ಎಂಡಮೆಕ್ ಕಾಯಿಲೆ. ಕೋವಿಡ್ ಮಾದರಿಯಲ್ಲಿ ಇದಕ್ಕೆ ಚಿಕಿತ್ಸೆ ನೀಡಬೇಕು. ಮೆಡಿಕಲ್ ಎಮರ್ಜೆನ್ಸಿ ಅಂತಾ ಘೋಷಣೆ ಮಾಡಬೇಕು ಎಂದರು.
ಈ ರೋಗಗಳ ಪತ್ತೆಗೆ ಹೆಚ್ಚು ದರ ತೆಗೆದುಕೊಳ್ಳುವ ಲ್ಯಾಬ್ ಗಳ ಬಾಗಿಲು ಮುಚ್ಚಬೇಕು. ಸೊಳ್ಳೆ ನಿಯಂತ್ರಣ ಮಾಡಬೇಕು. ಆರೋಗ್ಯ ಇಲಾಖೆ, ನಗರಾಭಿವೃದ್ಧಿ ಇಲಾಖೆ ಕೆಲಸ ಮಾಡಬೇಕು.ಜೊತೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಡೆಂಗ್ಯೂ ಹರಡುವಿಕೆ ಪತ್ತೆ ಹಚ್ಚುವ ಕೆಲಸ ಆಗಬೇಕು ಎಂದು ತಿಳಿಸಿದರು.
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…
ಮೈಸೂರು: ಬಡವರ ಮಕ್ಕಳೇ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುವ ಕಾರಣ ಶಾಲೆಗಳ ಅಭಿವೃದ್ಧಿ ಶಿಕ್ಷಕರ ಮೇಲಿದೆ. ಕ್ಷೇತ್ರದಲ್ಲಿ ಬರುವ…
ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಗ್ಗೆ ಬಾಧ್ಯಸ್ಥರ ಸಭೆ ಬೆಂಗಳೂರು: ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ…
ಕಾಂಗ್ರೆಸ್ ಮಾಡುವ ಪಾಪಕ್ಕೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದ್ದು, ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ…