Mysore
27
scattered clouds

Social Media

ಬುಧವಾರ, 13 ಮೇ 2026
Light
Dark

ಸದ್ಯಕ್ಕೆ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಚಿಂತನೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ ಮಾಡಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಡೀಸೆಲ್ ಬೆಲೆ ಹೆಚ್ಚಳವಾಗಿಲ್ಲ. ಒಂದು ವೇಳೆ ಹೆಚ್ಚಳವಾದರೆ, ಏನು ಮಾಡಲು ಆಗಲ್ಲ. ಈಗಾಗಲೇ ಡೀಸೆಲ್ ಬೆಲೆ ಹೆಚ್ಚಿದೆ ಎಂದರು.

ಡೀಸೆಲ್ ಬೆಲೆ ಹೆಚ್ಚಳ ಮಾಡುತ್ತಿರುವ ಮಾಹಿತಿ ನನಗಿಲ್ಲ. ಮಾಡದಿದ್ದರೆ ಸಂತೋಷ ಎಂದ ಅವರು, ಸಾರಿಗೆ ಸಂಸ್ಥೆಗಳ ನೌಕರರ ವೇತನವನ್ನು ಪರಿಷ್ಕರಣೆ ಮಾಡಿದ್ದು, ಸರ್ಕಾರದ ತೀರ್ಮಾನವನ್ನು ಹೇಳಿದ್ದೇವೆ. ಆದರೆ ನೌಕರರು ಒಪ್ಪದಿರುವ ಬಗ್ಗೆ ಏನೂ ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ 26 ಸಾವಿರ ಬಸ್‌ಗಳು ಹಾಗೂ 1700 ಎಲೆಕ್ಟ್ರಿಕ್ ಬಸ್‌ಗಳಿವೆ ಎಂದು ಮಾಹಿತಿ ನೀಡಿದ ಅವರು, ಸದ್ಯಕ್ಕೆ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಚಿಂತನೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.

 

Tags:
error: Content is protected !!