ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ ಮಾಡಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಡೀಸೆಲ್ ಬೆಲೆ ಹೆಚ್ಚಳವಾಗಿಲ್ಲ. ಒಂದು ವೇಳೆ ಹೆಚ್ಚಳವಾದರೆ, ಏನು ಮಾಡಲು ಆಗಲ್ಲ. ಈಗಾಗಲೇ ಡೀಸೆಲ್ ಬೆಲೆ ಹೆಚ್ಚಿದೆ ಎಂದರು.
ಡೀಸೆಲ್ ಬೆಲೆ ಹೆಚ್ಚಳ ಮಾಡುತ್ತಿರುವ ಮಾಹಿತಿ ನನಗಿಲ್ಲ. ಮಾಡದಿದ್ದರೆ ಸಂತೋಷ ಎಂದ ಅವರು, ಸಾರಿಗೆ ಸಂಸ್ಥೆಗಳ ನೌಕರರ ವೇತನವನ್ನು ಪರಿಷ್ಕರಣೆ ಮಾಡಿದ್ದು, ಸರ್ಕಾರದ ತೀರ್ಮಾನವನ್ನು ಹೇಳಿದ್ದೇವೆ. ಆದರೆ ನೌಕರರು ಒಪ್ಪದಿರುವ ಬಗ್ಗೆ ಏನೂ ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ 26 ಸಾವಿರ ಬಸ್ಗಳು ಹಾಗೂ 1700 ಎಲೆಕ್ಟ್ರಿಕ್ ಬಸ್ಗಳಿವೆ ಎಂದು ಮಾಹಿತಿ ನೀಡಿದ ಅವರು, ಸದ್ಯಕ್ಕೆ ಬಸ್ ಪ್ರಯಾಣ ದರ ಏರಿಕೆ ಮಾಡುವ ಚಿಂತನೆ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…
ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…