ರಾಜ್ಯ

ರಾಜ್ಯಕ್ಕೆ 5 ತಿಂಗಳಿನಿಂದ ಹಿಡಿದಿರುವ ಗ್ರಹಣ ಸದ್ಯಕ್ಕೆ ಬಿಡುವ ಲಕ್ಷಣಗಳು ಕಾಣುತ್ತಿಲ್ಲ : ಬಿಜೆಪಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ. ಚಂದ್ರನಿಗೆ ಹಿಡಿದ ಗ್ರಹಣ ಬಿಡಬಹುದು. ಆದರೆ ರಾಜ್ಯಕ್ಕೆ 5 ತಿಂಗಳಿನಿಂದ ಹಿಡಿದಿರುವ ಗ್ರಹಣ ಸದ್ಯಕ್ಕೆ ಬಿಡುವ ಲಕ್ಷಣಗಳು ಕಾಣುತ್ತಿಲ್ಲ. ಕಾಂಗ್ರೆಸ್ ಸರ್ಕಾರವನ್ನು ಎಟಿಎಂ ಸರ್ಕಾರ ಎಂದು ರಾಜ್ಯ ಬಿಜೆಪಿ ಕಿಚಾಯಿಸಿದೆ.

ಸಾಮಾಜಿಕ ಜಾಲತಾಣ X ಖಾತೆಯಲ್ಲಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ನಿನ್ನೆ ತಡರಾತ್ರಿ ದೇಶಕ್ಕೆ ಏರ್ಪಟ್ಟ ಚಂದ್ರಗ್ರಹಣಕ್ಕೆ ರಾಜ್ಯ ಸರ್ಕಾರವನ್ನು ಹೋಲಿಕೆ ಮಾಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ ಕರ್ನಾಟಕಕ್ಕೆ ಗ್ರಹಣ ಹಿಡಿದಿದೆ ಎಂದು ವ್ಯಂಗ್ಯ ಚಿತ್ರದ ಜೊತೆಗೆ ರಾಜ್ಯದಲ್ಲಿ ಯಾವುದಕ್ಕೆಲ್ಲಾ ಗ್ರಹಣ ಹಿಡಿದಿದೆ ಅನ್ನೋದರ ಪಟ್ಟಿ ಮಾಡಿದ್ದು, ಸರ್ಕಾರಕ್ಕೆ ಹಿಡಿದ ಗ್ರಹಣ ಬಿಟ್ಟಿಲ್ಲ ಎಂದು ಕಿಡಿಕಾರಿದೆ.

ರಾಜ್ಯ ಬಿಜೆಪಿ ಬಿಡುಗಡೆ ಮಾಡಿರುವ ಗ್ರಹಣದ 8 ಪಟ್ಟಿ

1.ಕಾವೇರಿಗೆ ಗ್ರಹಣ
2.ವಿದ್ಯುತ್‌ಗೆ ಗ್ರಹಣ
3.ಅಭಿವೃದ್ಧಿಗೆ ಗ್ರಹಣ
4.ಅನ್ನಭಾಗ್ಯಕ್ಕೆ ಗ್ರಹಣ
5.ಕೈಗಾರಿಕೆಗಳಿಗೆ ಗ್ರಹಣ
6.ಕುಡಿಯುವ ನೀರಿಗೆ ಗ್ರಹಣ
7.ಕೃಷಿ ಉತ್ಪನ್ನಗಳಿಗೆ ಗ್ರಹಣ
8.ಬ್ರ್ಯಾಂಡ್‌ ಬೆಂಗಳೂರಿಗೆ ಗ್ರಹಣ

ಹೀಗೆ ರಾಜ್ಯದ 8 ಪ್ರಮುಖ ಸಮಸ್ಯೆಗಳನ್ನು ಪಟ್ಟಿ ಮಾಡಿರುವ ರಾಜ್ಯ ಬಿಜೆಪಿ, 30 ವರ್ಷಗಳ ಹಿಂದಿನ ಆ ದಿನಗಳ ಗ್ರಹಣ ಇದೀಗ ಸಿದ್ದರಾಮಯ್ಯರವರ ಸರ್ಕಾರದ ಕೃಪೆಯಿಂದ ಕರ್ನಾಟಕಕ್ಕೆ ಮತ್ತೊಮ್ಮೆ ವಕ್ಕರಿಸಿದೆ. ಕೈ ಕಚ್ಚಾಟ ಎಂದು ವ್ಯಂಗ್ಯವಾಡಿ ಟ್ವೀಟ್ ಮಾಡಿದೆ.

https://x.com/BJP4Karnataka/status/1718454968318132670?s=20

lokesh

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

8 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

10 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago