ರಾಜ್ಯ

ವಿಧಾನಸೌಧದಲ್ಲಿ ಉಗ್ರರಿದ್ದಾರೆ : ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಎಚ್.ಡಿ. ಕುಮಾರಸ್ವಾಮಿ ಮಾರ್ಮಿಕವಾಗಿ ಹೇಳಿದ್ದೇನು..?

ಬೆಂಗಳೂರು : ವಿಧಾನಸೌಧದಲ್ಲಿ ಉಗ್ರರು ಇದ್ದಾರೆ ಎಂಬ ಹೇಳಿಕೆಯನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ನಾನು ಹೇಳಿದ್ದು ರಾಜಕೀಯ ಟೆರಿರಿಸ್ಟ್ ಗಳ ಬಗ್ಗೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಸೋಮವಾರ ಸಂಜೆ ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, ರೈತರನ್ನು ಹೆದರಿಸಿ ಒಕ್ಕೆಲೆಬ್ಬಿಸುವವರನ್ನು, ರೈತರನ್ನು ಹೆದರಿಸಲು ಜಿಲ್ಲಾಧಿಕಾರಿ ಕಚೇರಿ ಬಳಿಗೆ ಬಸ್ಸುಗಳಲ್ಲಿ ಗೂಂಡಾಗಳನ್ನು ಕರೆದುಕೊಂಡು ಬರುವವರನ್ನು ಭಯೋತ್ಪಾದಕರು ಎನ್ನದೇ ಬೇರೆ ಏನೆನ್ನಬೇಕು ಎಂದು ಪ್ರಶ್ನಿಸಿದರು.

ವಿಧಾನಸೌಧದಲ್ಲಿ ಈಗ ಇರುವವರು ಯಾವುದರಲ್ಲಾದರೂ ದಾಖಲೆ ಕೊಟ್ಟಿದ್ದಾರಾ? ಹಿಂದಿನ ಸರ್ಕಾರದ ವಿರುದ್ಧ 40% ಸರ್ಕಾರ ಅಂದ್ರು, ಇವರು ಏನಾದರೂ ದಾಖಲೆ ಕೊಟ್ಟರಾ? ಯಾವ ರೀತಿ ದುರಹಂಕಾರದಿಂದ ಹೆದರಿಸುವ ಕೆಲಸ ಮಾಡ್ತಿದ್ದಾರೆ ಎಂಬುದನ್ನು ನಾವು ನೀವೆಲ್ಲರೂ ನೋಡುತ್ತಿದ್ದೇವೆ ಎಂದು ಸಚಿವರು ಹೇಳಿದರು.

ಬಿಡದಿಯಲ್ಲಿ ಭೂಸ್ವಾಧೀನ ವಿರೋಧಿಸಲು ಬಂದ ಮುಗ್ಧ ರೈತರನ್ನು ಹೆದರಿಸಿ ಬೆದರಿಸಿದ್ದನ್ನು ಏನೆಂದು ಕರೆಯಬೇಕು? ಆ ದೃಶ್ಯಗಳನ್ನು ಮಾಧ್ಯಮಗಳೇ ದಿನಗಟ್ಟಲೆ ತೋರಿಸಿದರು. ಅದಕ್ಕಿಂತ ಟೆರಿರಿಸ್ಟ್ ಆಕ್ಟಿವಿಸ್ಟ್ ಬೇರೆ ಯಾರಾದರೂ ಬೇಕಾ? ರೈತರ ಮೇಲೆ ದಬ್ಬಾಳಿಕೆಯನ್ನು ಮಾಡಿದರು.

ಇದನ್ನೂ ಓದಿ:-ಮತ ಕಳ್ಳತನ ಪತ್ತೆ ಹಚ್ಚಿದ್ದೇ ಕರ್ನಾಟಕ ; ಇದೀಗ ದೇಶವ್ಯಾಪ್ತಿ ಅಕ್ರಮ ಬೆಳಕಿಗೆ : ಡಿಕೆಶಿ

ಭೂಸ್ವಾಧೀನಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯುವ ಸಂದರ್ಭದಲ್ಲಿ ಬಾಡಿಗೆ ಗೂಂಡಾಗಳನ್ನ ಕರೆದುಕೊಂಡು ಬಂದರು. ನಿಜವಾದ ರೈತರನ್ನ ಬಿಟ್ಟು, ಗೂಂಡಾಗಳನ್ನ ಡಿಸಿ ಕಚೇರಿಗೆ ಕರೆದುಕೊಂಡು ಬಂದಿದ್ದರು! ಇದು ಟೆರಿರಿಸ್ಟ್ ಸಂಸ್ಕೃತಿನಾ? ಅಥವಾ ಇನ್ನಾವ ಸಂಸ್ಕೃತಿ? ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

ಬಿಡದಿ ಟೌನ್ ಶಿಪ್ ಕುಮಾರಸ್ವಾಮಿ ಕೂಸು ಅಂತ ತೋರಿಸಲು ಹೊರಟಿದ್ದಾರೆ. ಆದರೆ ಕುಮಾರಸ್ವಾಮಿ ಕೂಸು ಬೇರೆ ತರಹ ಇತ್ತು. ಆಗ ದೊಡ್ಡ ಮಟ್ಟದಲ್ಲಿ ಕೃಷಿ ಚಟುವಟಿಕೆ ನಡೆಯುತ್ತಿರಲಿಲ್ಲ. ನಾವು ಜನರ ವಿರುದ್ಧ ಹೋಗಿರಲಿಲ್ಲ. ಆದರೆ, ಈಗ ಜನರಿಂದ ವಿಪರೀತ ವಿರೊಧ ಬರುತ್ತಿದ್ದರೂ ಇವರು ಬಿಡದಿ ಟೌನ್ ಶಿಪ್ ಮಾಡಲು ಹೊರಟಿದ್ದಾರೆ. ರೈತರನ್ನು ಹೆದರಿಸಿ ಭೂಸ್ವಾಧೀನ ಮಾಡಿಕೊಳ್ಳಲು ಹೊರಟಿರೋದು ಗೂಂಡಾ ವರ್ತನೆಯ? ಅಥವಾ ಟೆರಿರಿಸ್ಟ್ ವರ್ತನೆಯಾ? ಎಂದು ಸಚಿವರು ಖಾರವಾಗಿ ಪ್ರಶ್ನೆ ಮಾಡಿದರು.

ಬಿಡದಿ ಭಾಗದ ರೈತರ ಹೋರಾಟಕ್ಕೆ ನನ್ನ ಬೆಂಬಲ ಕೋರಿದ್ದಾರೆ. ಭಾನುವಾರ ಸಂಜೆ ಅನೇಕ ರೈತರು,ಹೆಣ್ಣು ಮಕ್ಕಳು ನನ್ನನ್ನು ಭೇಟಿಯಾಗಿ ದುಃಖ ತೋಡಿಕೊಂಡರು. ನನ್ನನ್ನ ರಾಜಕೀಯವಾಗಿ ಬೆಳೆಸಿದ ಜನರು ಅವರು. ಹೀಗಾಗಿ ಅವರಿಗೆ ಬೆಂಬಲ ಕೋಡೋದು ನನ್ನ ಕರ್ತವ್ಯ ಎಂದು ಸಚಿವರು ಹೇಳಿದರು.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

5 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

6 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

7 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

8 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

8 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

8 hours ago