ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಗಾಗಿಯೇ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ನಿನ್ನೆ ಸಚಿವ ಕೆ.ಎನ್.ರಾಜಣ್ಣ ಅವರು ಸದನದಲ್ಲಿ ಮಾತನಾಡುವ ವೇಳೆ 48 ಜನರ ಮೇಲೆ ಹನಿಟ್ರ್ಯಾಪ್ ಆಗಿದೆ ಎಂದಿದ್ದರು.
ಈ ಹಿನ್ನೆಲೆಯಲ್ಲಿ ಇಂದು ವಿಧಾನಸಭೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ಸಚಿವ ಕೆ.ಎನ್.ರಾಜಣ್ಣ ಸಾಮಾನ್ಯ ವ್ಯಕ್ತಿಯಲ್ಲ. ಅವರು ಸರ್ಕಾರದ ಮಂತ್ರಿಯಾಗಿದ್ದಾರೆ. ಅವರೇ ಸದನದಲ್ಲಿ ಈ ಬಗ್ಗೆ ಆರೋಪ ಮಾಡಿದ್ದಾರೆ. ಈ ಸರ್ಕಾರದಲ್ಲಿ ದಲಿತ ಮಂತ್ರಿಗಳಿಗೆ ಕಿಂಚಿತ್ತೂ ರಕ್ಷಣೆ ಇಲ್ಲ ಎಂದು ಕಿಡಿಕಾರಿದರು.
ಸಚಿವ ರಾಜಣ್ಣ ಅವರ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಯಾವುದೇ ಉತ್ತರ ನೀಡಿಲ್ಲ. ಇದು ಗಂಭೀರ ಪ್ರಕರಣ. ಎಲ್ಲಾ ಶಾಸಕರ, ಸದನದ ಹಾಗೂ ರಾಜ್ಯದ ಗೌರವದ ಪ್ರಶ್ನೆ. ಈ ಕುರಿತು ಸಿಬಿಐ ಹಾಗೂ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…