ಚಿಕ್ಕಬಳ್ಳಾಪುರ: ಇಸ್ರೇಲ್ ಹಾಗೂ ಅಮೇರಿಕಾ ನಡೆಸಿದ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಖನೇನಿಯ ಮಗಳು, ಅಳಿಯ, ಮೊಮ್ಮಕ್ಕಳು ಕೂಡ ದಾಳಿಯಲ್ಲಿ ಬಲಿಯಾಗಿದ್ದಾರೆ.
ಇರಾನ್ ನಾಯಕ ಅಲಿ ಖಮೇನಿ ಮೂಲತಃ ಉತ್ತರ ಪ್ರದೇಶದವರೆಂದು ತಿಳಿದುಬಂದಿದೆ. ಅಲಿ ಖಮೇನಿಗೂ ಕರ್ನಾಟಕದ ಚಿಕ್ಕಬಳ್ಳಾಪುರಕ್ಕೂ ಕೂಡ ನಂಟಿದೆ.
ಅಲಿ ಖಮೇನಿ ಹತ್ಯೆ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ. ಹತ್ಯೆ ವಿಚಾರ ಹೊರಬಂದ ಬಳಿಕ ಗ್ರಾಮಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳು ಬಂದ್ ಮಾಡಿ ಶೋಕಾಚರಣೆ ನಡೆಸಿದ್ದಾರೆ. ಅಲಿಪುರ ಗ್ರಾಮವನ್ನು ಮಿನಿ ಇರಾನ್ ಎಂದೇ ಕರೆಯಲಾಗುತ್ತದೆ.
1986ರಲ್ಲಿ ಅಯತೊಲ್ಲಾ ಅಲಿ ಖಮೇನಿ ಅವರು ಅಲಿಪುರ ಗ್ರಾಮಕ್ಕೆ ಆಗಮಿಸಿದ್ದರು. ಈ ಬಗ್ಗೆ ಸ್ಥಳೀಯರಲ್ಲಿ ನೆನಪು ಇನ್ನೂ ಹಸಿರಾಗಿದೆ. ಗ್ರಾಮದಲ್ಲಿರುವ ಮಸೀದಿಯಲ್ಲಿ ಅವರು ಪ್ರಾರ್ಥನೆ ಸಲ್ಲಿಸಿದ್ದನ್ನು ಹಿರಿಯರು ಸ್ಮರಿಸುತ್ತಿದ್ದಾರೆ. ಅಲಿಪುರದ ಸುಮಾರು 20 ಸಾವಿರ ಜನರು ಖಮೇನಿ ಅವರನ್ನು ಧರ್ಮಗುರುವೆಂದು ಗೌರವಿಸುತ್ತಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…