ರಾಜ್ಯ

ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಕೋರಮಂಗಲದ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ “ಪೊಲೀಸ್ ಧ್ವಜ ದಿನಾಚರಣೆ” ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಪದಕ” ಪ್ರದಾನ ಮಾಡಿ ಮಾತನಾಡಿದರು.

ಯಾವುದೇ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಆಯಾ ಠಾಣಾಧಿಕಾರಿಯ ಗಮನಕ್ಕೆ ಬರದಂತೆ ಯಾವುದೇ ಅಪರಾಧಗಳು, ಕೆಟ್ಟ ವ್ಯವಹಾರಗಳು ನಡೆಯಲು ಸಾಧ್ಯವಿಲ್ಲ ಎನ್ನುವುದು ನನ್ನ ನಂಬಿಕೆ ಎಂದರು.

ಹಲವು ರೀತಿಯ ಅಪರಾಧ ಪ್ರಕರಣಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಿ ಶಿಕ್ಷೆ ಪ್ರಮಾಣದಲ್ಲಿ ಕರ್ನಾಟಕ ರಾಜ್ಯ ಮುಂದಿದೆ. ಇದಕ್ಕಾಗಿ ಪೊಲೀಸ್ ಇಲಾಖೆಯನ್ನು ಅಭಿನಂದಿಸುವ ಜೊತೆಗೆ ಪ್ರಮಾಣ ಹೆಚ್ಚಾಗಿರುವ ಅಪರಾಧಗಳ ನಿಯಂತ್ರಣದಲ್ಲೂ ನಾವು ಶ್ರಮ ಹಾಕಬೇಕಿದೆ ಎಂದು ಸೂಚಿಸಿದರು.

ಸೈಬರ್ ಅಪರಾಧಗಳು ಸೇರಿದಂತೆ ನಾನಾ ರೀತಿಯ ಅಪರಾಧಗಳನ್ನು ತಡೆಯಲು ತಂತ್ರಜ್ಞಾನದ ಅವಕಾಶ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಮಯದ ಮಿತಿ ಇಲ್ಲದಂತೆ ದಿನದ 24 ಗಂಟೆಯೂ ಕರ್ತವ್ಯಪ್ರಜ್ಞೆ ಇಟ್ಟುಕೊಂಡು ಕೆಲಸ ಮಾಡುವುದರಿಂದ ಸಮಾಜದಲ್ಲಿ ನೆಮ್ಮದಿ ಮತ್ತು ಸೌಹಾರ್ದತೆ ನೆಲೆಸಿದೆ ಎಂದರು.

ಮಹಿಳೆಯರು, ಮಕ್ಕಳು ಮತ್ತು ದುರ್ಬಲರು ಹಾಗೂ ಅಸಹಾಯಕರ ನಮ್ಮ ಸರ್ಕಾರ ರಕ್ಷಣೆಗೆ ಮೊದಲ ಆದ್ಯತೆ ನೀಡುತ್ತಿದೆ. ಪೊಲೀಸರೂ ಇದನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡಬೇಕು ಎಂದರು.

ರಾಜ್ಯದ ಆರ್ಥಿಕ ಬೆಳವಣಿಗೆಗೂ, ಜಿಡಿಪಿ ಪ್ರಗತಿಗೂ ರಾಜ್ಯದ ಕಾನೂನು ಸುವ್ಯವಸ್ಥೆಗೂ ನೇರಾ ನೇರಾ ಸಂಬಂಧ ಇರುತ್ತದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಪೊಲೀಸ್ ಇಲಾಖೆ ಕಾರ್ಯನಿರ್ವಹಿಸಿದರೆ ಆರ್ಥಿಕತೆಗೂ ದೊಡ್ಡ ಕೊಡುಗೆ ಕೊಟ್ಟಂತಾಗುತ್ತದೆ ಎಂದರು.

ಕರ್ನಾಟಕ ಡ್ರಗ್ಸ್ ಮುಕ್ತ ರಾಜ್ಯ ಆಗಬೇಕು ಎನ್ನುವ ಗುರಿ ನಮ್ಮ ಸರ್ಕಾರದ್ದಾಗಿದೆ. ಇದು ಪೊಲೀಸ್ ಇಲಾಖೆಯ ಗುರಿಯೂ ಆಗಬೇಕಿದೆ ಎಂದರು.

ಪದಕ ವಿಜೇತರೆಲ್ಲರಿಗೂ ಶುಭಾಶಯ ಕೋರಿದ ಮುಖ್ಯಮಂತ್ರಿಗಳು, ಇವರ ಕಾರ್ಯ ಮತ್ತು ವೃತ್ತಿಪರತೆ ಇತರರಿಗೂ ಸ್ಫೂರ್ತಿಯಾಗಲಿ ಎಂದು ಹಾರೈಸಿದರು.

ಈ ವೇಳೆ ಗೃಹ ಸಚಿವ ಜಿ.ಪರಮೇಶ್ವರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಉಪಸ್ಥಿತರಿದ್ದರು.‌

 

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

43 mins ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

1 hour ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

1 hour ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

4 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

4 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

4 hours ago