ರಾಜ್ಯ

ಸಹಕಾರ ಚಳವಳಿ ಇನ್ನಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವ ಅಗತ್ಯವಿದೆ : ಸಿ.ಎಂ

ಬೆಂಗಳೂರು : ಸಹಕಾರ ಚಳವಳಿ ಇನ್ನಷ್ಟು ಪರಿಣಾಮಕಾರಿಯಾಗಿ ಮುನ್ನಡೆಸುವ ಅಗತ್ಯವಿದ್ದು, ಜವಾಹರಲಾಲ್ ನೆಹರೂ ಅವರ ಜಯಂತಿ ದಿನವೇ 72ನೇ ಸಹಕಾರಿ ಸಪ್ತಾಹದ ಉದ್ಘಾಟನೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಡೆದ 72ನೇ ಸಹಕಾರ ಸಪ್ತಾಹ ಆಚರಣೆಯ ಸಿದ್ಧತಾ ಸಭೆಯ ಅಧ್ಯಕ್ಷ ಕತೆ ವಹಿಸಿ, ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು.

ರಾಜ್ಯ ಮಟ್ಟದ 72 ನೇ ಸಪ್ತಾಹದ ಉದ್ಘಾಟನೆಯನ್ನು ನೆಹರೂ ಜಯಂತಿಯಂದೇ ದಿನಾಂಕ ನವೆಂಬರ್ 14ರಂದು ಮಾಡಲು ನಿರ್ಧರಿಸಿದ್ದೇವೆ.

ಅರಮನೆ ಮೈದಾನದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಸಪ್ತಾಹ ನಡೆಯಲಿದ್ದು ಇದರ ಉದ್ಘಾಟನೆಯನ್ನು ನಾನು ನೆರವೇರಿಸಲಿದ್ದೇನೆ. ಮಂಗಳೂರು, ರಾಯಚೂರು, ಹಾವೇರಿ, ಹೊಸಪೇಟೆ, ಕೊಪ್ಪಳದಲ್ಲಿ ಸಪ್ತಾಹ ನಡೆಯಲಿದ್ದು ಸಮಾರೋಪ ಸಮಾರಂಭ ನವೆಂಬರ್ 20 ರಂದು ಚಾಮರಾಜನಗರದಲ್ಲಿ ನಡೆಯಲಿದೆ. ನಾನು ಸಪ್ತಾಹದ ಉದ್ಘಾಟನೆಯನ್ನೂ ನೆರವೇರಿಸಿ, ಸಮಾರೋಪದಲ್ಲೂ ಭಾಗವಹಿಸುತ್ತೇನೆ ಎಂದರು.

ಇದನ್ನು ಓದಿ: ಟ್ರಾಕ್ಟರ್‌ ಡಿಕ್ಕಿ : ಐದು ವರ್ಷದ ಬಾಲಕಿ ಸಾವು, ಓರ್ವ ಬಾಲಕಿ ಗಂಭೀರ

“ಸಹಕಾರ ರತ್ನ” ಪ್ರಶಸ್ತಿ ಪ್ರದಾನ ಸಮಾರಂಭವೂ ಸಪ್ತಾಹದ ಉದ್ಘಾಟನೆಯ ದಿನವೇ ನಡೆಯಲಿದೆ. ರಾಜ್ಯದ ಎಲ್ಲಾ ಸಹಕಾರಿ ಧುರೀಣರು ನನಗೇ ಜವಾಬ್ದಾರಿ ಕೊಟ್ಟಿದ್ದು ನಾನೇ “ಸಹಕಾರ ರತ್ನ” ಪ್ರಶಸ್ತಿಗೆ ಹೆಸರು ಸೂಚಿಸಲು ಕೋರಿದ್ದಾರೆ. ಸಹಕಾರ ಮಹಾ ಮಂಡಳದ ಅಧ್ಯಕ್ಷರ ಜೊತೆ ಚರ್ಚಿಸಿ ಪ್ರಶಸ್ತಿಗೆ ಉತ್ತಮ ಸಹಕಾರಿಯನ್ನು ಆಯ್ಕೆ ಮಾಡಲಾಗುವುದು ಎಂದರು.

ಹಾಲಿನ ಡೈರಿಗಳನ್ನು ಹಾಲಿನ ಒಕ್ಕೂಟಗಳ ಅಧೀನದಲ್ಲಿ ಮೊದಲ ಬಾರಿಗೆ ತಂದಿದ್ದು ನಾನೇ. ಹೀಗೆ ತರುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಟ್ಟೆ ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.

ಸಹಕಾರ ರಾಜ್ಯದ ವ್ಯಾಪ್ತಿಗೆ ಬರುವ ವಿಚಾರ. ಕೇಂದ್ರದ ವ್ಯಾಪ್ತಿಗೆ ಬರುವ ವಿಚಾರ ಅಲ್ಲ ಎಂದು ಅಭಿಪ್ರಾಯಪಟ್ಟರು.

ಆಂದೋಲನ ಡೆಸ್ಕ್

Recent Posts

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

4 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026: ಗಜಪಯಣಕ್ಕೆ ವಿದ್ಯುಕ್ತ ಚಾಲನೆ

ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…

6 hours ago

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

7 hours ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

7 hours ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

7 hours ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

11 hours ago