ಬೆಂಗಳೂರು: ನಾವೆಲ್ಲಾ ಸಿಎಂ ಸಿದ್ದರಾಮಯ್ಯ ಪರ ಇದ್ದು, ಕಾನೂನು ಹೋರಾಟ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸಚಿವರೊಂದಿಗೆ ತುರ್ತು ಸುದ್ದಿಗೋಷ್ಠಿ ನಡೆಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದು ಕೇವಲ ರಾಜಕೀಯ ಪಿತೂರಿ. ಯಾವುದೇ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಸಿಎಂ ಜೊತೆ ನಾವೆಲ್ಲಾ ಇದ್ದೇವೆ. ಇದನ್ನು ಕಾನೂನು ಹೋರಾಟ ಮಾಡುವ ಮೂಲಕ ಎದುರಿಸುತ್ತೇವೆ ಎಂದರು.
ರಾಜ್ಯಪಾಲರು ಸಂವಿಧಾನ ವಿರೋಧಿ ಹಾಗೂ ಪ್ರಜಾಪ್ರಭುತ್ವ ಮಾರಕವಾದ ಪತ್ರ ಕಳುಹಿಸಿದ್ದಾರೆ. ಇದು ರಾಜಕೀಯ ಪಿತೂರಿ. ಮುಡಾ ಪ್ರಕರಣದಲ್ಲಿ ಯಾವುದೇ ಲೋಷದೋಷ ಆಗಿಲ್ಲ ಎಂದು ರಾಜ್ಯಪಾಲರಿಗೆ ತಿಳಿಸಿದ್ದೇವೆ ಎಂದರು.
ಬಿಜೆಪಿ ಹಾಗೂ ಜೆಡಿಎಸ್ನವರು ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಇಡೀ ಸಂಪುಟ ಸಚಿವರು ಸಿಎಂ ಬೆನ್ನಿಗೆ ನಿಂತಿದ್ದೇವೆ. ಹೈಕಮಾಂಡ್ ಸಹ ಸಿಎಂ ಬೆನ್ನಿಗೆ ನಿಂತಿದೆ. ನಾವು ಕಾನೂನು ರೀತಿಯಲ್ಲಿ ಹೋರಾಟ ಮಾಡುತ್ತೇವೆ. ಈ ಪ್ರಾಸಿಕ್ಯೂಷನ್ ಕಾನೂನು ವಿರುದ್ಧವಾಗಿದೆ ಎಂದು ಕಿಡಿಕಾರಿದರು.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…