ರಾಜ್ಯ

ಸಿಎಟಿ ಆದೇಶ ; ಮೇಲ್ಮನವಿ ಸಲ್ಲಿಸಲು ಅವಕಾಶವಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಆಡಳಿತ ನ್ಯಾಯಮಂಡಳಿಯ ಐಪಿಎಸ್ ಅಧಿಕಾರಿಗಳ ಅಮಾನತ್ತು ಆದೇಶವನ್ನು ರದ್ದು ಮಾಡಿರುವ ಬಗ್ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕೇಂದ್ರ ಕಚೇರಿ ‘ವಾರ್ತಾ ಸೌಧ’ದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಅವಕಾಶ ದೊರೆತಿದ್ದರಿಂದ ಮುಖ್ಯಮಂತ್ರಿಯಾದೆ: ಶಾಸಕ ಬಿ.ಆರ್.ಪಾಟೀಲ್ ಅವರು ಸಿದ್ದರಾಮಯ್ಯರವರು ಅದೃಷ್ಟದಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಅವರ ಹೇಳಿಕೆ ಬಗ್ಗೆ ಮಾಹಿತಿಯಿಲ್ಲ. ಬಿ.ಆರ್.ಪಾಟೀಲ್ ಹಾಗೂ ನಾನು ಒಟ್ಟಿಗೆ ಶಾಸಕರಾಗಿದ್ದರಿಂದ ಹಾಗೂ ನನಗೆ ಮುಖ್ಯಮಂತ್ರಿಯಾಗಲು ಅವಕಾಶ ದೊರೆತಿದ್ದರಿಂದ, ಬಿ.ಆರ್.ಪಾಟೀಲ್ ಅವರು ಈ ರೀತಿ ಹೇಳಿಕೆ ನೀಡಿರಬಹುದು ಎಂದರು.

ಜಾತಿಗಣತಿ ವಿವರವನ್ನು ಆನ್ ಲೈನ್ ನಲ್ಲಿಯೂ ಸಲ್ಲಿಸುವ ವ್ಯವಸ್ಥೆಯಿದೆ: ಜಾತಿಗಣತಿ ನಡೆಸಲಾಗಿದೆ ಎಂಬ ಪೋಸ್ಟರ್ ಗಳನ್ನು ಮನೆಗಳಿಗೆ ಭೇಟಿ ನೀಡದೇ, ಮನೆಯ ಮುಂದೆ ಅಂಟಿಸುತ್ತಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಜಾತಿಗಣತಿಯನ್ನು ನಡೆಸಲು ಹಲವು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಆನ್ ಲೈನ್ ಮೂಲಕವೂ ಜಾತಿವಿವರಗಳನ್ನು ನೀಡಬಹುದು ಅಥವಾ ಮನೆಗಳಿಗೆ ಭೇಟಿ ನೀಡಿ ವಿವರಗಳನ್ನು ಪಡೆಯಬಹುದು. ಈ ಬಗ್ಗೆ ಸತ್ಯಾಸತ್ಯತೆ ತಿಳಿದು ಮಾಧ್ಯಮದವರು ಪ್ರಶ್ನಿಸಬೇಕು ಎಂದರು.

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

2 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

4 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

4 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

5 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

8 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

8 hours ago