ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಬಗ್ಗೆ ಪರಿಷತ್ತಿನಲ್ಲಿ ಮಾತನಾಡಿದ ಅವರು, ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳ ವಿತರಣೆ ಕುರಿತು ಈಗಾಗಲೇ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಟೆಂಡರ್ ಪ್ರಕ್ರಿಯೆಯಿಂದಾಗಿ ಸರಬರಾಜು ಆಗದ ಔಷಧಗಳನ್ನು ಸ್ಥಳೀಯವಾಗಿಯೇ ಖರೀದಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ದೇಶದಲ್ಲಿ ಕೆಲ ತಯಾರಿಕಾ ಕಂಪನಿಗಳು ಕಳಪೆ ಔಷಧ ಸರಬರಾಜು ಮಾಡುತ್ತಿರುವುದರಿಂದ ಸಮಸ್ಯೆ ಉಂಟಾಗಿದೆ.
ಇಂತಹ ಔಷಧ ಸೇವನೆಯಿಂದ ಜೀವ ಹಾನಿಯಾಗುತ್ತಿದ್ದು, ಇದನ್ನು ತಡೆಯಲು ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕಳೆದ ಜನವರಿಯಿಂದ ರಾಜ್ಯದಲ್ಲಿ ಉಂಟಾದ ಬಾಣಂತಿಯರ ಸಾವುಗಳಿಗೆ ನಿಖರ ಕಾರಣ ತಿಳಿಯಲು ಸ್ಯಾಂಪಲ್ಸ್ಗಳನ್ನು ವಿಶ್ಲೇಷಿಸಲಾಗುತ್ತಿದೆ. ದೇಶಕ್ಕೆ ಮಾದರಿ ಪ್ರತ್ಯೇಕ ನೀತಿಯನ್ನು ಜಾರಿ ಮಾಡಲು ಮುಂದಾಗಿದ್ದೇವೆ. ಕೇಂದ್ರ ಸರ್ಕಾರವು ಸಹ ಇದಕ್ಕೆ ಸಹಕಾರ ನೀಡಬೇಕಾಗಿದೆ ಎಂದರು.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…