ರಾಜ್ಯ

ದೇವರ ಹಿಂದಿನ ಶಕ್ತಿಯ ಕಥೆ ಇದೆ; ಹಬ್ಬದ ದಿನ ‘ಶಿವಣ್ಣ 131’ ಚಿತ್ರಕ್ಕೆ ಚಾಲನೆ

‘ಶಿವಣ್ಣ 131’ ಚಿತ್ರವು ವರಮಹಾಲಕ್ಷ್ಮೀ ಹಬ್ಬದಂದು ಪ್ರಾರಂಭವಾಗಲಿದೆ ಎಂದು ಚಿತ್ರದ ನಿರ್ಮಾಪಕ ಸುಧೀರ್‍ ಮೊದಲೇ ಹೇಳಿದ್ದರು. ಅದರಂತೆ ಶುಕ್ರವಾರ ಹಬ್ಬದ ಪ್ರಯುಕ್ತ ಚಿತ್ರ ಅಧಿಕೃತವಾಗಿ ಪ್ರಾರಂಭವಾಗಿದ್ದು, ಚಿತ್ರೀಕರಣ ಶುರುವಾಗಿದೆ.

ಕಂಠೀರವ ಸ್ಟುಡಿಯೋದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ ಮೊದಲ ದೃಶ್ಯಕ್ಕೆ ನಿರ್ಮಾಪಕ ಎಸ್.ಎನ್. ರೆಡ್ಡಿ ಕ್ಲ್ಯಾಪ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದಾರೆ.

ಈ ಚಿತ್ರದ ಕಥೆಯನ್ನು ನಿರ್ದೇಶಕ ಕಾರ್ತಿಕ್‍ ಅದ್ವೈತ್‍ ಎರಡು ವರ್ಷಗಳ ಹಿಂದೆಯೇ ಹೇಳಿದ್ದರಂತೆ. ಆದರೆ, ಇನ್ನೂ ಏನೋ ಬೇಕು ಅಂತನಿಸಿದ್ದರಿಂದ ಚಿತ್ರ ತಡವಾಗಿದೆ. ‘ಕಥೆ ಚೆನ್ನಾಗಿತ್ತು. ಆದರೆ, ಅದರಲ್ಲಿ ಇನ್ನೇನೋ ಬೇಕು ಅಂತನಿಸುತ್ತಿತ್ತು. ಅದನ್ನು ಹುಡುಕುವ ಪ್ರಯತ್ನವಾಗುತ್ತಿತ್ತು. ಈಗ ಕಥೆ ಎಲ್ಲರಿಗೂ ಇಷ್ಟವಾಗುವಂತಿವೆ. ಸಾಮಾನ್ಯವಾಗಿ ಒಂದು ಚಿತ್ರ ನೋಡಿ ಇದು ಕಲಾವಿದರ ಚಿತ್ರ, ತಂತ್ರಜ್ಞರ ಚಿತ್ರ ಎಂದು ವಿಭಾಗ ಮಾಡುತ್ತೇವೆ. ಆದರೆ, ಈ ಚಿತ್ರದಲ್ಲಿ ಎಲ್ಲರಿಗೂ ಕೆಲಸವಿದೆ. ಬರೀ ಕಲಾವಿದರಷ್ಟೇ ಅಲ್ಲ, ತಂತ್ರಜ್ಞರಿಗೆ ಹೆಚ್ಚಿನ ಕೆಲಸವಿದೆ. ಹಾಗಾಗಿ, ಇದು ಇದು ಯಾರಿಗೋ ಒಬ್ಬರಿಗೆ ಸಂಬಂಧಿಸಿದ ಚಿತ್ರವಲ್ಲ, ಎಲ್ಲರಿಗೂ ಕೆಲಸವಿರುವ ಚಿತ್ರ. ಇದು ಎಲ್ಲರ ಚಿತ್ರ. ಎಲ್ಲರ ಶ್ರಮ ಚಿತ್ರದಲ್ಲಿ ನೋಡಬಹುದು’ ಎಂದರು.

ಇಲ್ಲಿ ಪ್ರತಿಯೊಂದು ಪಾತ್ರವೂ ಬಹಳ ಮುಖ್ಯ ಎನ್ನುವ ಶಿವಣ್ಣ, ‘ಇದೇ ಮೊದಲ ಬಾರಿಗೆ ನವೀನ್‍ ಶಂಕರ್‍ ಜೊತೆಗೆ ಕೆಲಸ ಮಾಡುತ್ತಿದ್ದೇನೆ. ಮಧು ಗುರುಸ್ವಾಮಿ ಸಹ ಒಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಚಿತ್ರದಲ್ಲಿ ಬಹಳ ಪಾತ್ರಗಳಿವೆ. ಇದೆಲ್ಲದರ ಜೊತೆಗೆ ಚಿತ್ರದಲ್ಲಿ ಇನ್ನೊಂದು ಸರ್‍ಪ್ರೈಸ್‍ ಪಾತ್ರವಿದೆ. ಆ ಪಾತ್ರವನ್ನು ಯಾರು ಮಾಡುತ್ತಾರೆ ಎಂದು ಇನ್ನೂ ನಿರ್ಧಾರವಾಗಿಲ್ಲ. ಬೇರೆ ಭಾಷೆಯ ನಟರು ನಟಿಸುವ ಸಾಧ್ಯತೆ ಇದೆ’ ಎಂದರು.

ಚಿತ್ರದ ಕಥೆ ಹೇಳದಿದ್ದರೂ, ಯಾವ ತರಹ ಇರಬಹುದು ಎಂದು ಸೂಚಿಸಿದ ಅವರು, ‘ನಾವು ಕೆಲವರನ್ನು ದೇವರೆಂದು ನಂಬುತ್ತೇವೆ. ಆದರೆ, ದೇವರಿಗೂ ಒಬ್ಬ ದೇವರು ಬೇಕು. ಹಾಗಾಗಿ, ದೇವರ ಹಿಂದೆಯೂ ಒಬ್ಬ ದೇವರಿರುತ್ತಾರೆ. ಇದು ಒಂದೆಳೆಯ ಕಥೆ. ಯಾರು ಏನೇ ಮಾಡಿದರೂ ಅವರ ಹಿಂದೊಂದು ಶಕ್ತಿ ಕೆಲಸ ಮಾಡುತ್ತಿರುತ್ತದೆ ಎಂಬುದನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನ ಮಾಡಲಾಗಿದೆ ‘ ಎಂದರು.

‘ಶಿವಣ್ಣನ 131’ ಒಂದು ಆ್ಯಕ್ಷನ್‍ ಥ್ರಿಲ್ಲರ್‍ ಚಿತ್ರವಾಗಿದ್ದು, ಶಿವರಾಜಕುಮಾರ್‍ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಭುವನೇಶ್ವರಿ ಪ್ರೊಡಕ್ಷನ್ ಬ್ಯಾನರ್‍ನಡಿ ಎಸ್.ಎನ್. ರೆಡ್ಡಿ ಹಾಗೂ ಸುಧೀರ್ ಪಿ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈ ಹಿಂದೆ ಒಂದು ತಮಿಳು ಚಿತ್ರ ನಿರ್ದೇಶಿಸಿದ್ದ ಕಾರ್ತಿಕ್‍ ಅದ್ವೈತ್‍ ಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡುತ್ತಿದ್ದಾರೆ.

‘ಘೋಸ್ಟ್’ ಖ್ಯಾತಿಯ ವಿ.ಎಂ. ಪ್ರಸನ್ನ ಹಾಗೂ ‘ಸೀತಾರಾಮಂ’ ಖ್ಯಾತಿಯ ಜಯಕೃಷ್ಣ ಚಿತ್ರಕಥೆ ಬರೆಯುತ್ತಿದ್ದಾರೆ. ‘ವಿಕ್ರಂ ವೇದ’ ಮತ್ತು ‘ಖೈದಿ’ ಸಿನಿಮಾ ಖ್ಯಾತಿಯ ಸ್ಯಾಮ್ ಸಿ.ಎಸ್ ಸಂಗೀತ, ಎ.ಜೆ. ಶೆಟ್ಟಿ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಭೂಮಿಕಾ

Recent Posts

ಮಧ್ಯ ಪ್ರಾಚ್ಯ ಬಿಕ್ಕಟ್ಟು | ವಿದೇಶಾಂಗ ನೀತಿ ಬದಲಿಸಲು ಖರ್ಗೆ ಆಗ್ರಹ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…

42 mins ago

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

2 hours ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

2 hours ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

3 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

4 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

4 hours ago