ರಾಜ್ಯ

ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್, ಟ್ಯಾಬ್ ಕೊಡಲು ದುಡ್ಡಿನ ಕೊರತೆ ಇದೆ : ಸಂತೋಷ್‌ ಲಾಡ್

ಹಾವೇರಿ‌ : ನಮ್ಮ ಇಲಾಖೆಯ ರಿವ್ಯೂವ್ ಮಾಡ್ತಾ ಇದ್ದೀವಿ. ನಾಲ್ಕು ಕೋಟಿ ವೆಚ್ಚದಲ್ಲಿ ಹಿರೇಕೆರೂರಿನಲ್ಲಿ ಕಾರ್ಮಿಕ ಭವನ ಉದ್ಘಾಟನೆ ಕೂಡಾ ಮಾಡಲಿದ್ದೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಜಿಲ್ಲೆಯ ಹಿರೆಕೇರೂರ ಪಟ್ಟಣ ಶಾಸಕ ಯು.ಬಿ ಬಣಕಾರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಲ್ಕು ಕೋಟಿ ವೆಚ್ಚದಲ್ಲಿ ಹಿರೆಕೇರೂರಲ್ಲಿ ಕಾರ್ಮಿಕ ಭವನ ಉದ್ಘಾಟನೆ ಮಾಡಲಿದ್ದೇವೆ. ಭವನ ನಿರ್ಮಿಸಲು ಒತ್ತಾಯ ಮಾಡ್ತಾ ಇರೋರು ಬಳಿಕ ಅವರೇ ಮೆಂಟೆನ್ ಮಾಡಬೇಕು. ಜನರೇ ಸರ್ಕಾರದ ಮುಂದೆ ಬೇಡಿಕೆ ಇಡುತ್ತಾರೆ. ಹೀಗಾಗಿ ಜನರು ಎಚ್ಚೆತ್ತುಕೊಳ್ಳಬೇಕು, ಇದರಲ್ಲಿ ಅವರದ್ದು ಜವಾಬ್ದಾರಿ ಇದೆ. ರಸ್ತೆಯಲ್ಲಿ ಡಾಂಬರ್ ಹಾಕಲಾಗಿರುತ್ತದೆ ಪಕ್ಕದಲ್ಲೆ ಕೇಸರು ಇರುತ್ತದೆ. ಅದನ್ನು ಸಲಾಕೆಯಿಂದ ಎತ್ತಿ ಹಾಕೊಲ್ಲಾ ಜನರು ಹಾಗೇ ಹೋಗ್ತಾರೆ ಎಂದು ಉದಾಹರಣೆ ಮೂಲಕ ಜನರಿಗೆ ತಿಳಿ ಹೇಳಿದ್ದಾರೆ.

ರಾಜ್ಯದಲ್ಲಿ ಕಾರ್ಮಿಕ ಇಲಾಖೆಯಲ್ಲಿ ಬೋಗಸ್ ಕಾರ್ಡ್ ಗಳ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ 45 ಲಕ್ಷ ಕಾರ್ಡ್ ಗಳು ಕಾರ್ಮಿಕ ಇಲಾಖೆಯಲ್ಲಿ ಇದೆ. 60% ರಿಂದ 70% ನಕಲಿ ಕಾರ್ಡ್ ಗಳು ಇದ್ದಾವೆ. ಫೇಕ್ ಕಾರ್ಡ್ ಗಳನ್ನೂ ಹುಡುಕಿ ತೆಗೆದು ಹಾಕುತ್ತೇವೆ ಎಂದು ಹೇಳಿದ್ದಾರೆ.

ನಮ್ಮ ಇಲಾಖೆಯಲ್ಲಿ ದುಡ್ಡು ಇದೆ ಎಂದು ಫೇಕ್ ಕಾರ್ಡ್ ಮಾಡಿಕೊಂಡು ಅರ್ಜಿ ಹಾಕಿದ್ದಾರೆ. ಅದನ್ನು ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದೇವೆ. ಹೆಚ್ಚಿನ ಲ್ಯಾಪ್‌ಟಾಪ್ ಹಾಗೂ ಟ್ಯಾಬ್ ಕೊಡುವುದಕ್ಕೆ ನಮ್ಮಲ್ಲಿ ದುಡ್ಡಿನ ಕೊರತೆ ಇದೆ. ಮುಂದೆ ಇಲಾಖೆಯಲ್ಲಿ ಕಾರ್ಮಿಕರಿಗೆ ಅನೇಕ ಯೋಜನೆಗಳನ್ನು ತರುತ್ತಿದ್ದೇವೆ ಎಂದು ಭರವಸೆ ನೀಡಿದ್ದಾರೆ.

ಸಿಎಂ ಹಾಗೂ ಡಿಸಿಎಂ ಇಬ್ಬರ ಬಣ ರಾಜಕೀಯ ವಿಚಾರವಾಗಿ ಸ್ಪಷ್ಟನೆ ನೀಡಿದ ಅವರು, ನಾನು ಕ್ಲೀಯರ್ ಮಾಡುತ್ತಾ ಇದೀನಿ. ಇನ್ನೂ ಮುಂದೆ ಈ ಪ್ರಶ್ನೆಗೆ ನಾನು ಉತ್ತರ ಕೊಡೋದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

lokesh

Recent Posts

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

1 hour ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

1 hour ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

2 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

3 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

3 hours ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

4 hours ago