ರಾಜ್ಯ

ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್, ಟ್ಯಾಬ್ ಕೊಡಲು ದುಡ್ಡಿನ ಕೊರತೆ ಇದೆ : ಸಂತೋಷ್‌ ಲಾಡ್

ಹಾವೇರಿ‌ : ನಮ್ಮ ಇಲಾಖೆಯ ರಿವ್ಯೂವ್ ಮಾಡ್ತಾ ಇದ್ದೀವಿ. ನಾಲ್ಕು ಕೋಟಿ ವೆಚ್ಚದಲ್ಲಿ ಹಿರೇಕೆರೂರಿನಲ್ಲಿ ಕಾರ್ಮಿಕ ಭವನ ಉದ್ಘಾಟನೆ ಕೂಡಾ ಮಾಡಲಿದ್ದೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಜಿಲ್ಲೆಯ ಹಿರೆಕೇರೂರ ಪಟ್ಟಣ ಶಾಸಕ ಯು.ಬಿ ಬಣಕಾರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಲ್ಕು ಕೋಟಿ ವೆಚ್ಚದಲ್ಲಿ ಹಿರೆಕೇರೂರಲ್ಲಿ ಕಾರ್ಮಿಕ ಭವನ ಉದ್ಘಾಟನೆ ಮಾಡಲಿದ್ದೇವೆ. ಭವನ ನಿರ್ಮಿಸಲು ಒತ್ತಾಯ ಮಾಡ್ತಾ ಇರೋರು ಬಳಿಕ ಅವರೇ ಮೆಂಟೆನ್ ಮಾಡಬೇಕು. ಜನರೇ ಸರ್ಕಾರದ ಮುಂದೆ ಬೇಡಿಕೆ ಇಡುತ್ತಾರೆ. ಹೀಗಾಗಿ ಜನರು ಎಚ್ಚೆತ್ತುಕೊಳ್ಳಬೇಕು, ಇದರಲ್ಲಿ ಅವರದ್ದು ಜವಾಬ್ದಾರಿ ಇದೆ. ರಸ್ತೆಯಲ್ಲಿ ಡಾಂಬರ್ ಹಾಕಲಾಗಿರುತ್ತದೆ ಪಕ್ಕದಲ್ಲೆ ಕೇಸರು ಇರುತ್ತದೆ. ಅದನ್ನು ಸಲಾಕೆಯಿಂದ ಎತ್ತಿ ಹಾಕೊಲ್ಲಾ ಜನರು ಹಾಗೇ ಹೋಗ್ತಾರೆ ಎಂದು ಉದಾಹರಣೆ ಮೂಲಕ ಜನರಿಗೆ ತಿಳಿ ಹೇಳಿದ್ದಾರೆ.

ರಾಜ್ಯದಲ್ಲಿ ಕಾರ್ಮಿಕ ಇಲಾಖೆಯಲ್ಲಿ ಬೋಗಸ್ ಕಾರ್ಡ್ ಗಳ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ 45 ಲಕ್ಷ ಕಾರ್ಡ್ ಗಳು ಕಾರ್ಮಿಕ ಇಲಾಖೆಯಲ್ಲಿ ಇದೆ. 60% ರಿಂದ 70% ನಕಲಿ ಕಾರ್ಡ್ ಗಳು ಇದ್ದಾವೆ. ಫೇಕ್ ಕಾರ್ಡ್ ಗಳನ್ನೂ ಹುಡುಕಿ ತೆಗೆದು ಹಾಕುತ್ತೇವೆ ಎಂದು ಹೇಳಿದ್ದಾರೆ.

ನಮ್ಮ ಇಲಾಖೆಯಲ್ಲಿ ದುಡ್ಡು ಇದೆ ಎಂದು ಫೇಕ್ ಕಾರ್ಡ್ ಮಾಡಿಕೊಂಡು ಅರ್ಜಿ ಹಾಕಿದ್ದಾರೆ. ಅದನ್ನು ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದೇವೆ. ಹೆಚ್ಚಿನ ಲ್ಯಾಪ್‌ಟಾಪ್ ಹಾಗೂ ಟ್ಯಾಬ್ ಕೊಡುವುದಕ್ಕೆ ನಮ್ಮಲ್ಲಿ ದುಡ್ಡಿನ ಕೊರತೆ ಇದೆ. ಮುಂದೆ ಇಲಾಖೆಯಲ್ಲಿ ಕಾರ್ಮಿಕರಿಗೆ ಅನೇಕ ಯೋಜನೆಗಳನ್ನು ತರುತ್ತಿದ್ದೇವೆ ಎಂದು ಭರವಸೆ ನೀಡಿದ್ದಾರೆ.

ಸಿಎಂ ಹಾಗೂ ಡಿಸಿಎಂ ಇಬ್ಬರ ಬಣ ರಾಜಕೀಯ ವಿಚಾರವಾಗಿ ಸ್ಪಷ್ಟನೆ ನೀಡಿದ ಅವರು, ನಾನು ಕ್ಲೀಯರ್ ಮಾಡುತ್ತಾ ಇದೀನಿ. ಇನ್ನೂ ಮುಂದೆ ಈ ಪ್ರಶ್ನೆಗೆ ನಾನು ಉತ್ತರ ಕೊಡೋದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

lokesh

Recent Posts

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

4 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

4 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

4 hours ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

4 hours ago

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

10 hours ago