ರಾಜ್ಯ

ಕಾರ್ಮಿಕರ ಮಕ್ಕಳಿಗೆ ಲ್ಯಾಪ್‌ಟಾಪ್, ಟ್ಯಾಬ್ ಕೊಡಲು ದುಡ್ಡಿನ ಕೊರತೆ ಇದೆ : ಸಂತೋಷ್‌ ಲಾಡ್

ಹಾವೇರಿ‌ : ನಮ್ಮ ಇಲಾಖೆಯ ರಿವ್ಯೂವ್ ಮಾಡ್ತಾ ಇದ್ದೀವಿ. ನಾಲ್ಕು ಕೋಟಿ ವೆಚ್ಚದಲ್ಲಿ ಹಿರೇಕೆರೂರಿನಲ್ಲಿ ಕಾರ್ಮಿಕ ಭವನ ಉದ್ಘಾಟನೆ ಕೂಡಾ ಮಾಡಲಿದ್ದೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.

ಜಿಲ್ಲೆಯ ಹಿರೆಕೇರೂರ ಪಟ್ಟಣ ಶಾಸಕ ಯು.ಬಿ ಬಣಕಾರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಲ್ಕು ಕೋಟಿ ವೆಚ್ಚದಲ್ಲಿ ಹಿರೆಕೇರೂರಲ್ಲಿ ಕಾರ್ಮಿಕ ಭವನ ಉದ್ಘಾಟನೆ ಮಾಡಲಿದ್ದೇವೆ. ಭವನ ನಿರ್ಮಿಸಲು ಒತ್ತಾಯ ಮಾಡ್ತಾ ಇರೋರು ಬಳಿಕ ಅವರೇ ಮೆಂಟೆನ್ ಮಾಡಬೇಕು. ಜನರೇ ಸರ್ಕಾರದ ಮುಂದೆ ಬೇಡಿಕೆ ಇಡುತ್ತಾರೆ. ಹೀಗಾಗಿ ಜನರು ಎಚ್ಚೆತ್ತುಕೊಳ್ಳಬೇಕು, ಇದರಲ್ಲಿ ಅವರದ್ದು ಜವಾಬ್ದಾರಿ ಇದೆ. ರಸ್ತೆಯಲ್ಲಿ ಡಾಂಬರ್ ಹಾಕಲಾಗಿರುತ್ತದೆ ಪಕ್ಕದಲ್ಲೆ ಕೇಸರು ಇರುತ್ತದೆ. ಅದನ್ನು ಸಲಾಕೆಯಿಂದ ಎತ್ತಿ ಹಾಕೊಲ್ಲಾ ಜನರು ಹಾಗೇ ಹೋಗ್ತಾರೆ ಎಂದು ಉದಾಹರಣೆ ಮೂಲಕ ಜನರಿಗೆ ತಿಳಿ ಹೇಳಿದ್ದಾರೆ.

ರಾಜ್ಯದಲ್ಲಿ ಕಾರ್ಮಿಕ ಇಲಾಖೆಯಲ್ಲಿ ಬೋಗಸ್ ಕಾರ್ಡ್ ಗಳ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ 45 ಲಕ್ಷ ಕಾರ್ಡ್ ಗಳು ಕಾರ್ಮಿಕ ಇಲಾಖೆಯಲ್ಲಿ ಇದೆ. 60% ರಿಂದ 70% ನಕಲಿ ಕಾರ್ಡ್ ಗಳು ಇದ್ದಾವೆ. ಫೇಕ್ ಕಾರ್ಡ್ ಗಳನ್ನೂ ಹುಡುಕಿ ತೆಗೆದು ಹಾಕುತ್ತೇವೆ ಎಂದು ಹೇಳಿದ್ದಾರೆ.

ನಮ್ಮ ಇಲಾಖೆಯಲ್ಲಿ ದುಡ್ಡು ಇದೆ ಎಂದು ಫೇಕ್ ಕಾರ್ಡ್ ಮಾಡಿಕೊಂಡು ಅರ್ಜಿ ಹಾಕಿದ್ದಾರೆ. ಅದನ್ನು ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದೇವೆ. ಹೆಚ್ಚಿನ ಲ್ಯಾಪ್‌ಟಾಪ್ ಹಾಗೂ ಟ್ಯಾಬ್ ಕೊಡುವುದಕ್ಕೆ ನಮ್ಮಲ್ಲಿ ದುಡ್ಡಿನ ಕೊರತೆ ಇದೆ. ಮುಂದೆ ಇಲಾಖೆಯಲ್ಲಿ ಕಾರ್ಮಿಕರಿಗೆ ಅನೇಕ ಯೋಜನೆಗಳನ್ನು ತರುತ್ತಿದ್ದೇವೆ ಎಂದು ಭರವಸೆ ನೀಡಿದ್ದಾರೆ.

ಸಿಎಂ ಹಾಗೂ ಡಿಸಿಎಂ ಇಬ್ಬರ ಬಣ ರಾಜಕೀಯ ವಿಚಾರವಾಗಿ ಸ್ಪಷ್ಟನೆ ನೀಡಿದ ಅವರು, ನಾನು ಕ್ಲೀಯರ್ ಮಾಡುತ್ತಾ ಇದೀನಿ. ಇನ್ನೂ ಮುಂದೆ ಈ ಪ್ರಶ್ನೆಗೆ ನಾನು ಉತ್ತರ ಕೊಡೋದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago