ಹಾವೇರಿ : ನಮ್ಮ ಇಲಾಖೆಯ ರಿವ್ಯೂವ್ ಮಾಡ್ತಾ ಇದ್ದೀವಿ. ನಾಲ್ಕು ಕೋಟಿ ವೆಚ್ಚದಲ್ಲಿ ಹಿರೇಕೆರೂರಿನಲ್ಲಿ ಕಾರ್ಮಿಕ ಭವನ ಉದ್ಘಾಟನೆ ಕೂಡಾ ಮಾಡಲಿದ್ದೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಜಿಲ್ಲೆಯ ಹಿರೆಕೇರೂರ ಪಟ್ಟಣ ಶಾಸಕ ಯು.ಬಿ ಬಣಕಾರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಲ್ಕು ಕೋಟಿ ವೆಚ್ಚದಲ್ಲಿ ಹಿರೆಕೇರೂರಲ್ಲಿ ಕಾರ್ಮಿಕ ಭವನ ಉದ್ಘಾಟನೆ ಮಾಡಲಿದ್ದೇವೆ. ಭವನ ನಿರ್ಮಿಸಲು ಒತ್ತಾಯ ಮಾಡ್ತಾ ಇರೋರು ಬಳಿಕ ಅವರೇ ಮೆಂಟೆನ್ ಮಾಡಬೇಕು. ಜನರೇ ಸರ್ಕಾರದ ಮುಂದೆ ಬೇಡಿಕೆ ಇಡುತ್ತಾರೆ. ಹೀಗಾಗಿ ಜನರು ಎಚ್ಚೆತ್ತುಕೊಳ್ಳಬೇಕು, ಇದರಲ್ಲಿ ಅವರದ್ದು ಜವಾಬ್ದಾರಿ ಇದೆ. ರಸ್ತೆಯಲ್ಲಿ ಡಾಂಬರ್ ಹಾಕಲಾಗಿರುತ್ತದೆ ಪಕ್ಕದಲ್ಲೆ ಕೇಸರು ಇರುತ್ತದೆ. ಅದನ್ನು ಸಲಾಕೆಯಿಂದ ಎತ್ತಿ ಹಾಕೊಲ್ಲಾ ಜನರು ಹಾಗೇ ಹೋಗ್ತಾರೆ ಎಂದು ಉದಾಹರಣೆ ಮೂಲಕ ಜನರಿಗೆ ತಿಳಿ ಹೇಳಿದ್ದಾರೆ.
ರಾಜ್ಯದಲ್ಲಿ ಕಾರ್ಮಿಕ ಇಲಾಖೆಯಲ್ಲಿ ಬೋಗಸ್ ಕಾರ್ಡ್ ಗಳ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ 45 ಲಕ್ಷ ಕಾರ್ಡ್ ಗಳು ಕಾರ್ಮಿಕ ಇಲಾಖೆಯಲ್ಲಿ ಇದೆ. 60% ರಿಂದ 70% ನಕಲಿ ಕಾರ್ಡ್ ಗಳು ಇದ್ದಾವೆ. ಫೇಕ್ ಕಾರ್ಡ್ ಗಳನ್ನೂ ಹುಡುಕಿ ತೆಗೆದು ಹಾಕುತ್ತೇವೆ ಎಂದು ಹೇಳಿದ್ದಾರೆ.
ನಮ್ಮ ಇಲಾಖೆಯಲ್ಲಿ ದುಡ್ಡು ಇದೆ ಎಂದು ಫೇಕ್ ಕಾರ್ಡ್ ಮಾಡಿಕೊಂಡು ಅರ್ಜಿ ಹಾಕಿದ್ದಾರೆ. ಅದನ್ನು ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದೇವೆ. ಹೆಚ್ಚಿನ ಲ್ಯಾಪ್ಟಾಪ್ ಹಾಗೂ ಟ್ಯಾಬ್ ಕೊಡುವುದಕ್ಕೆ ನಮ್ಮಲ್ಲಿ ದುಡ್ಡಿನ ಕೊರತೆ ಇದೆ. ಮುಂದೆ ಇಲಾಖೆಯಲ್ಲಿ ಕಾರ್ಮಿಕರಿಗೆ ಅನೇಕ ಯೋಜನೆಗಳನ್ನು ತರುತ್ತಿದ್ದೇವೆ ಎಂದು ಭರವಸೆ ನೀಡಿದ್ದಾರೆ.
ಸಿಎಂ ಹಾಗೂ ಡಿಸಿಎಂ ಇಬ್ಬರ ಬಣ ರಾಜಕೀಯ ವಿಚಾರವಾಗಿ ಸ್ಪಷ್ಟನೆ ನೀಡಿದ ಅವರು, ನಾನು ಕ್ಲೀಯರ್ ಮಾಡುತ್ತಾ ಇದೀನಿ. ಇನ್ನೂ ಮುಂದೆ ಈ ಪ್ರಶ್ನೆಗೆ ನಾನು ಉತ್ತರ ಕೊಡೋದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…