ಹಾವೇರಿ : ನಮ್ಮ ಇಲಾಖೆಯ ರಿವ್ಯೂವ್ ಮಾಡ್ತಾ ಇದ್ದೀವಿ. ನಾಲ್ಕು ಕೋಟಿ ವೆಚ್ಚದಲ್ಲಿ ಹಿರೇಕೆರೂರಿನಲ್ಲಿ ಕಾರ್ಮಿಕ ಭವನ ಉದ್ಘಾಟನೆ ಕೂಡಾ ಮಾಡಲಿದ್ದೇವೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಜಿಲ್ಲೆಯ ಹಿರೆಕೇರೂರ ಪಟ್ಟಣ ಶಾಸಕ ಯು.ಬಿ ಬಣಕಾರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಲ್ಕು ಕೋಟಿ ವೆಚ್ಚದಲ್ಲಿ ಹಿರೆಕೇರೂರಲ್ಲಿ ಕಾರ್ಮಿಕ ಭವನ ಉದ್ಘಾಟನೆ ಮಾಡಲಿದ್ದೇವೆ. ಭವನ ನಿರ್ಮಿಸಲು ಒತ್ತಾಯ ಮಾಡ್ತಾ ಇರೋರು ಬಳಿಕ ಅವರೇ ಮೆಂಟೆನ್ ಮಾಡಬೇಕು. ಜನರೇ ಸರ್ಕಾರದ ಮುಂದೆ ಬೇಡಿಕೆ ಇಡುತ್ತಾರೆ. ಹೀಗಾಗಿ ಜನರು ಎಚ್ಚೆತ್ತುಕೊಳ್ಳಬೇಕು, ಇದರಲ್ಲಿ ಅವರದ್ದು ಜವಾಬ್ದಾರಿ ಇದೆ. ರಸ್ತೆಯಲ್ಲಿ ಡಾಂಬರ್ ಹಾಕಲಾಗಿರುತ್ತದೆ ಪಕ್ಕದಲ್ಲೆ ಕೇಸರು ಇರುತ್ತದೆ. ಅದನ್ನು ಸಲಾಕೆಯಿಂದ ಎತ್ತಿ ಹಾಕೊಲ್ಲಾ ಜನರು ಹಾಗೇ ಹೋಗ್ತಾರೆ ಎಂದು ಉದಾಹರಣೆ ಮೂಲಕ ಜನರಿಗೆ ತಿಳಿ ಹೇಳಿದ್ದಾರೆ.
ರಾಜ್ಯದಲ್ಲಿ ಕಾರ್ಮಿಕ ಇಲಾಖೆಯಲ್ಲಿ ಬೋಗಸ್ ಕಾರ್ಡ್ ಗಳ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ 45 ಲಕ್ಷ ಕಾರ್ಡ್ ಗಳು ಕಾರ್ಮಿಕ ಇಲಾಖೆಯಲ್ಲಿ ಇದೆ. 60% ರಿಂದ 70% ನಕಲಿ ಕಾರ್ಡ್ ಗಳು ಇದ್ದಾವೆ. ಫೇಕ್ ಕಾರ್ಡ್ ಗಳನ್ನೂ ಹುಡುಕಿ ತೆಗೆದು ಹಾಕುತ್ತೇವೆ ಎಂದು ಹೇಳಿದ್ದಾರೆ.
ನಮ್ಮ ಇಲಾಖೆಯಲ್ಲಿ ದುಡ್ಡು ಇದೆ ಎಂದು ಫೇಕ್ ಕಾರ್ಡ್ ಮಾಡಿಕೊಂಡು ಅರ್ಜಿ ಹಾಕಿದ್ದಾರೆ. ಅದನ್ನು ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದೇವೆ. ಹೆಚ್ಚಿನ ಲ್ಯಾಪ್ಟಾಪ್ ಹಾಗೂ ಟ್ಯಾಬ್ ಕೊಡುವುದಕ್ಕೆ ನಮ್ಮಲ್ಲಿ ದುಡ್ಡಿನ ಕೊರತೆ ಇದೆ. ಮುಂದೆ ಇಲಾಖೆಯಲ್ಲಿ ಕಾರ್ಮಿಕರಿಗೆ ಅನೇಕ ಯೋಜನೆಗಳನ್ನು ತರುತ್ತಿದ್ದೇವೆ ಎಂದು ಭರವಸೆ ನೀಡಿದ್ದಾರೆ.
ಸಿಎಂ ಹಾಗೂ ಡಿಸಿಎಂ ಇಬ್ಬರ ಬಣ ರಾಜಕೀಯ ವಿಚಾರವಾಗಿ ಸ್ಪಷ್ಟನೆ ನೀಡಿದ ಅವರು, ನಾನು ಕ್ಲೀಯರ್ ಮಾಡುತ್ತಾ ಇದೀನಿ. ಇನ್ನೂ ಮುಂದೆ ಈ ಪ್ರಶ್ನೆಗೆ ನಾನು ಉತ್ತರ ಕೊಡೋದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…