The Union Minister for Finance and Corporate Affairs, Smt. Nirmala Sitharaman briefing the media on Post 50th meeting of GST Council, in New Delhi on July 11, 2023.
ಬೆಂಗಳೂರು: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ನೀಡಬೇಕಾದ ಯಾವುದೇ ಬಾಕಿ ಉಳಿದಿಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ರಾಜ್ಯಕ್ಕೆ ಬರ ಪರಿಹಾರಕ್ಕೆ ಸಂಬಂಧಪಟ್ಟಂತೆ ಹಣ ಬಿಡುಗಡೆ ಮಾಡಲು ಎನ್ ಡಿ ಆರ್ ಎಫ್ನ ಒಂದು ಕಮಿಟಿ ಇದೆ. ಆ ಕಮಿಟಿ ನಿರ್ಧಾರ ಮಾಡುತ್ತದೆ. ನರೇಂದ್ರ ಮೋದಿಯವರು ಪ್ರಧಾನಿ ಆಗುವ ಮುನ್ನ 10 ವರ್ಷ ಕಾಲ ಗುಜರಾತ್ ಮುಖ್ಯಮಂತ್ರಿಯಾಗಿದ್ದವರು. ಹೀಗಾಗಿ ಅವರಿಗೆ ಕೇಂದ್ರದಿಂದ ಹಣವನ್ನು ಸೂಕ್ತ ಕಾಲಕ್ಕೆ ನೀಡುವುದು ಹೇಗೆಂಬುದು ಗೊತ್ತಿದೆ.
ಬರ ಪರಿಹಾರದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯದ ಕೃಷಿ, ಕಂದಾಯ ಸಚಿವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದರೂ, ಆ ಪತ್ರ ನನಗೆ ತಲುಪುವ ಮುನ್ನವೇ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಾರೆ. ಬೆಂಗಳೂರಿನಲ್ಲಿ ಮಾತ್ರ ಈ ವಿಚಾರವನ್ನು ಹೇಳುತ್ತಿಲ್ಲ. ಎರಡು ದಿನಗಳ ಹಿಂದೆ, ಕೇರಳದಲ್ಲಿದ್ದಾಗಲೂ ಹೀಗೆ ಹೇಳಿದ್ದೇನೆ. ನಮ್ಮ ಕಡೆಯಿಂದ ಕರ್ನಾಟಕಕ್ಕೆ ಏನೂ ಬಾಕಿ ಇಲ್ಲ ಎಂದ ಅವರು, ನಾನು ರಾಜ್ಯದ ಸಂಸದೆಯಾಗಿದ್ದು, ನನಗೂ ಜವಾಬ್ದಾರಿ ಇದೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರದ ಪತ್ರಕ್ಕೆ ನಾನು ಕಾಯುತ್ತಿದ್ದೇನೆ. ಅಕೌಂಟೆಂಟ್ ಜನರಲ್ ಸಹಿ ಇಲ್ಲದೆ ಹಣ ಕಳಿಸೋಕೆ ಸಾಧ್ಯನಾ? ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದರು. ಕರ್ನಾಟಕಕ್ಕೆ ಬರ ಪರಿಹಾರಕ್ಕಾಗಿ ಎನ್ ಡಿಆರ್ ಎಫ್ ಹಣ ಬಿಡುಗಡೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸೀತಾರಾಮನ್, “ಎನ್ ಡಿಆರ್ ಎಫ್ ಗಾಗಿ ಒಂದು ಸಮಿತಿ ಇದೆ. ಗೃಹ ಸಚಿವ ಅಮಿತ್ ಶಾ ಅದನ್ನು ಪರಿಶೀಲಿಸುತ್ತಾರೆ. ಈ ಸಂಬಂಧ ಕೃಷ್ಣ ಬೈರೇಗೌಡ ಭೇಟಿ ಮಾಡಿದ್ದು, ಅವರಿಗೆ ವಿವರಿಸಿದ್ದೇನೆ ಎಂದರು
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದೆಹಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಕೈಗೊಂಡಿದ್ದು, ಕೆಮಿಕಲ್ ಘಟಕದಲ್ಲಿ ಲೇಬಲ್ ಇಲ್ಲದ ಖಾಲಿ ಬಾಟಲ್ಗಳನ್ನು…
ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…
ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…
ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…
ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…