The Union Minister for Finance and Corporate Affairs, Smt. Nirmala Sitharaman briefing the media on Post 50th meeting of GST Council, in New Delhi on July 11, 2023.
ಬೆಂಗಳೂರು: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ನೀಡಬೇಕಾದ ಯಾವುದೇ ಬಾಕಿ ಉಳಿದಿಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ರಾಜ್ಯಕ್ಕೆ ಬರ ಪರಿಹಾರಕ್ಕೆ ಸಂಬಂಧಪಟ್ಟಂತೆ ಹಣ ಬಿಡುಗಡೆ ಮಾಡಲು ಎನ್ ಡಿ ಆರ್ ಎಫ್ನ ಒಂದು ಕಮಿಟಿ ಇದೆ. ಆ ಕಮಿಟಿ ನಿರ್ಧಾರ ಮಾಡುತ್ತದೆ. ನರೇಂದ್ರ ಮೋದಿಯವರು ಪ್ರಧಾನಿ ಆಗುವ ಮುನ್ನ 10 ವರ್ಷ ಕಾಲ ಗುಜರಾತ್ ಮುಖ್ಯಮಂತ್ರಿಯಾಗಿದ್ದವರು. ಹೀಗಾಗಿ ಅವರಿಗೆ ಕೇಂದ್ರದಿಂದ ಹಣವನ್ನು ಸೂಕ್ತ ಕಾಲಕ್ಕೆ ನೀಡುವುದು ಹೇಗೆಂಬುದು ಗೊತ್ತಿದೆ.
ಬರ ಪರಿಹಾರದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯದ ಕೃಷಿ, ಕಂದಾಯ ಸಚಿವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದರೂ, ಆ ಪತ್ರ ನನಗೆ ತಲುಪುವ ಮುನ್ನವೇ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಾರೆ. ಬೆಂಗಳೂರಿನಲ್ಲಿ ಮಾತ್ರ ಈ ವಿಚಾರವನ್ನು ಹೇಳುತ್ತಿಲ್ಲ. ಎರಡು ದಿನಗಳ ಹಿಂದೆ, ಕೇರಳದಲ್ಲಿದ್ದಾಗಲೂ ಹೀಗೆ ಹೇಳಿದ್ದೇನೆ. ನಮ್ಮ ಕಡೆಯಿಂದ ಕರ್ನಾಟಕಕ್ಕೆ ಏನೂ ಬಾಕಿ ಇಲ್ಲ ಎಂದ ಅವರು, ನಾನು ರಾಜ್ಯದ ಸಂಸದೆಯಾಗಿದ್ದು, ನನಗೂ ಜವಾಬ್ದಾರಿ ಇದೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರದ ಪತ್ರಕ್ಕೆ ನಾನು ಕಾಯುತ್ತಿದ್ದೇನೆ. ಅಕೌಂಟೆಂಟ್ ಜನರಲ್ ಸಹಿ ಇಲ್ಲದೆ ಹಣ ಕಳಿಸೋಕೆ ಸಾಧ್ಯನಾ? ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದರು. ಕರ್ನಾಟಕಕ್ಕೆ ಬರ ಪರಿಹಾರಕ್ಕಾಗಿ ಎನ್ ಡಿಆರ್ ಎಫ್ ಹಣ ಬಿಡುಗಡೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸೀತಾರಾಮನ್, “ಎನ್ ಡಿಆರ್ ಎಫ್ ಗಾಗಿ ಒಂದು ಸಮಿತಿ ಇದೆ. ಗೃಹ ಸಚಿವ ಅಮಿತ್ ಶಾ ಅದನ್ನು ಪರಿಶೀಲಿಸುತ್ತಾರೆ. ಈ ಸಂಬಂಧ ಕೃಷ್ಣ ಬೈರೇಗೌಡ ಭೇಟಿ ಮಾಡಿದ್ದು, ಅವರಿಗೆ ವಿವರಿಸಿದ್ದೇನೆ ಎಂದರು
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…