The Union Minister for Finance and Corporate Affairs, Smt. Nirmala Sitharaman briefing the media on Post 50th meeting of GST Council, in New Delhi on July 11, 2023.
ಬೆಂಗಳೂರು: ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ನೀಡಬೇಕಾದ ಯಾವುದೇ ಬಾಕಿ ಉಳಿದಿಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ರಾಜ್ಯಕ್ಕೆ ಬರ ಪರಿಹಾರಕ್ಕೆ ಸಂಬಂಧಪಟ್ಟಂತೆ ಹಣ ಬಿಡುಗಡೆ ಮಾಡಲು ಎನ್ ಡಿ ಆರ್ ಎಫ್ನ ಒಂದು ಕಮಿಟಿ ಇದೆ. ಆ ಕಮಿಟಿ ನಿರ್ಧಾರ ಮಾಡುತ್ತದೆ. ನರೇಂದ್ರ ಮೋದಿಯವರು ಪ್ರಧಾನಿ ಆಗುವ ಮುನ್ನ 10 ವರ್ಷ ಕಾಲ ಗುಜರಾತ್ ಮುಖ್ಯಮಂತ್ರಿಯಾಗಿದ್ದವರು. ಹೀಗಾಗಿ ಅವರಿಗೆ ಕೇಂದ್ರದಿಂದ ಹಣವನ್ನು ಸೂಕ್ತ ಕಾಲಕ್ಕೆ ನೀಡುವುದು ಹೇಗೆಂಬುದು ಗೊತ್ತಿದೆ.
ಬರ ಪರಿಹಾರದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯದ ಕೃಷಿ, ಕಂದಾಯ ಸಚಿವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದರೂ, ಆ ಪತ್ರ ನನಗೆ ತಲುಪುವ ಮುನ್ನವೇ ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಾರೆ. ಬೆಂಗಳೂರಿನಲ್ಲಿ ಮಾತ್ರ ಈ ವಿಚಾರವನ್ನು ಹೇಳುತ್ತಿಲ್ಲ. ಎರಡು ದಿನಗಳ ಹಿಂದೆ, ಕೇರಳದಲ್ಲಿದ್ದಾಗಲೂ ಹೀಗೆ ಹೇಳಿದ್ದೇನೆ. ನಮ್ಮ ಕಡೆಯಿಂದ ಕರ್ನಾಟಕಕ್ಕೆ ಏನೂ ಬಾಕಿ ಇಲ್ಲ ಎಂದ ಅವರು, ನಾನು ರಾಜ್ಯದ ಸಂಸದೆಯಾಗಿದ್ದು, ನನಗೂ ಜವಾಬ್ದಾರಿ ಇದೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರದ ಪತ್ರಕ್ಕೆ ನಾನು ಕಾಯುತ್ತಿದ್ದೇನೆ. ಅಕೌಂಟೆಂಟ್ ಜನರಲ್ ಸಹಿ ಇಲ್ಲದೆ ಹಣ ಕಳಿಸೋಕೆ ಸಾಧ್ಯನಾ? ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ಆರೋಪಗಳಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದರು. ಕರ್ನಾಟಕಕ್ಕೆ ಬರ ಪರಿಹಾರಕ್ಕಾಗಿ ಎನ್ ಡಿಆರ್ ಎಫ್ ಹಣ ಬಿಡುಗಡೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸೀತಾರಾಮನ್, “ಎನ್ ಡಿಆರ್ ಎಫ್ ಗಾಗಿ ಒಂದು ಸಮಿತಿ ಇದೆ. ಗೃಹ ಸಚಿವ ಅಮಿತ್ ಶಾ ಅದನ್ನು ಪರಿಶೀಲಿಸುತ್ತಾರೆ. ಈ ಸಂಬಂಧ ಕೃಷ್ಣ ಬೈರೇಗೌಡ ಭೇಟಿ ಮಾಡಿದ್ದು, ಅವರಿಗೆ ವಿವರಿಸಿದ್ದೇನೆ ಎಂದರು
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…
ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…
ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್ ಅವರ ಈಗಿನ ಸಾಧನೆಯನ್ನು…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು…