ಕಲಬುರ್ಗಿ: ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ಮಾತುಗಳು ಹೆಚ್ಚಾಗಿದ್ದು, ಎಲ್ಲೆಡೆ ಇದೇ ಚರ್ಚೆಯಾಗುತ್ತಿದೆ. ಈ ಬಗ್ಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಗೊಂದಲ ಶೀಘ್ರದಲ್ಲೇ ಬಗೆಹರಿಯಲಿದೆ. ಸದ್ಯಕ್ಕಂತೂ ಸಿಎಂ ಬದಲಾವಣೆ ಇಲ್ಲ. ಬದಲಾವಣೆ ಮಾಡಬೇಕು ಎಂದಾಗ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ನಾವೆಲ್ಲಾ ಸೇರಿ ಚರ್ಚೆ ಮಾಡುತ್ತೇನೆ. ಆದರೆ ಈಗ ಅಂತಹ ಯಾವುದೇ ಸಂದರ್ಭ ಇಲ್ಲ. ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಇದ್ದಾರೆ. ಹಾಗಾಗಿ ಈ ವಿಚಾರ ಬರುವುದಿಲ್ಲ ಎಂದು ಹೇಳಿದರು.
ಈ ಮೂಲಕ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಬದಲಾವಣೆ ವಿಚಾರಕ್ಕೆ ಪೂರ್ಣ ವಿರಾಮ ಇಟ್ಟಿದ್ದು, ಡಿಕೆಶಿ ಅಭಿಮಾನಿಗಳಲ್ಲಿ ಕೊಂಚ ಬೇಸರ ತರಿಸಿದೆ.




