ಬೆಂಗಳೂರು : ನಾಯಕತ್ವ ಬದಲಾವಣೆಯ ಕುರಿತಾಗಿ ಕಾಂಗ್ರೆಸ್ ಪಕ್ಷದ ಒಳಗೆ ಯಾವುದೇ ಪ್ರಶ್ನೆಗಳು ಏಳದಿದ್ದರೂ ನಮ್ಮ ಮಾಧ್ಯಮ ಮಿತ್ರರು ಪ್ರತಿದಿನ ಅದೇ ಪ್ರಶ್ನೆಗಳನ್ನು ಸರ್ಕಾರದ ಮುಖ್ಯಸ್ಥರು, ಸಚಿವರು ಹಾಗೂ ನಾಯಕರ ಬಳಿ ಕೇಳುತ್ತಿರುವುದು ಮುಜುಗರ ತರುವಂತಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.
ತಮ್ಮ ಸಾಮಾಜಿಕ ಜಾಲ ತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಸರ್ಕಾರವೊಂದು ತಾನು ಜನರಿಗೆ ನೀಡಿದ ಪ್ರಣಾಳಿಕೆಗಳನ್ನು ಸಮರ್ಥವಾಗಿ ಜಾರಿಗೊಳಿಸಿ, ಜನ ಸಾಮಾನ್ಯರ ಬದುಕು ಹಸನಾಗುವ ನಿಟ್ಟಿನಲ್ಲಿ ಆಡಳಿತವನ್ನು ನೀಡುತ್ತಿರುವಾಗ, ಆಡಳಿತಾತ್ಮಕ ಸ್ಥಿರತೆ, ಜನರ ನಂಬಿಕೆಗೆ ವಿರುದ್ಧವಾಗಿ, ಜನರನ್ನು ಗೊಂದಲಗೊಳಿಸುವ ಹಾಗೆ ಪ್ರತಿದಿನ ಕೇಳುತ್ತಿರುವ ಪ್ರಶ್ನೆಗಳು ಆಡಳಿತಾತ್ಮಕ ದೃಷ್ಟಿಯಿಂದ ಅಷ್ಟೊಂದು ಸಮಂಜಸವಾಗಿ ಕಾಣುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಇದನ್ನೂ ಓದಿ:-ಕೋಲ್ಕತ್ತ | ಭೂಕಂಪನ : ತೀವ್ರತೆಗೆ ಪೂರ್ವ ಭಾರತದ ಹಲವೆಡೆ ಕಂಪಿಸಿದ ಭೂಮಿ
ಒಂದು ರಾಜಕೀಯ ಪಕ್ಷವು ಕಾಲದ ಅಗತ್ಯಕ್ಕೆ ತಕ್ಕಂತೆ, ಜನರ ಅಭಿಪ್ರಾಯವನ್ನು ಆಧರಿಸಿ, ನಾಯಕರ ಸಾಮರ್ಥ್ಯವನ್ನು ಅರ್ಥೈಸಿ ಪಕ್ಷದ ವ್ಯಾಪ್ತಿಯ ಒಳಗೆ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ಇದು ಯಾವುದೇ ಬಹಿರಂಗ ಒತ್ತಡದಿಂದ ಅಥವಾ ವ್ಯಕ್ತಿಗತ ಆಸೆಗಳಿಂದ ಜರುಗುವಂತಹ ಪ್ರಕ್ರಿಯೆ ಅಲ್ಲ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.
ನಾಯಕತ್ವ ಬದಲಾವಣೆಯ ನಿರ್ಧಾರ ಏನಾದರೂ ಇದ್ದರೆ ಅದನ್ನು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮಾಧ್ಯಮದ ಮುಂದೆಯೇ ಬಂದು ತಿಳಿಸುತ್ತದೆ. ಹೀಗಾಗಿ ಹೋದಲ್ಲಿ ಬಂದಲ್ಲಿ ರಚ್ಚೆ ಹಿಡಿದವರಂತೆ ನಾಯಕತ್ವ ಬದಲಾವಣೆಯ ಪ್ರಶ್ನೆಯನ್ನು ಕೇಳುವ ಬದಲು, ಜನರ ನಂಬಿಕೆಯನ್ನು ಹೆಚ್ಚಿಸುವಂತಹ ಮತ್ತು ಜನರ ಬದುಕಿಗೆ ಪ್ರಯೋಜನ ಆಗುವಂತಹ ಮತ್ತು ಆಡಳಿತಾತ್ಮಕವಾಗಿ ಸರ್ಕಾರವನ್ನು ಎಚ್ಚರಿಸುವ ಕೆಲಸವನ್ನು ಮಾಡಬೇಕು ಎಂದು ಮಾಧ್ಯಮ ಮಿತ್ರರನ್ನು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…
ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ…
ಹುಣಸೂರು ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಗ್ರಾಪಂನವರು ಸಕಾಲಕ್ಕೆ ಕಸ ವಿಲೇವಾರಿ ಮಾಡದೇ ಇರುವುದರಿಂದ ಕಸದ ರಾಶಿಯೇ ಬಿದ್ದಿದ್ದು, ಸೊಳ್ಳೆ, ನೊಣಗಳ…
ಐಪಿಎಲ್ ಆವೃತ್ತಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಯನ್ನು ಹೊಂದಿದೆ, ಈ ಆವೃತ್ತಿಯಲ್ಲಿ ನಾನಾ ರಾಜ್ಯಗಳ ಹೆಸರಿನಲ್ಲಿ ಹಲವು ತಂಡಗಳು ಸೆಣಸಾಡಲಿವೆ. ನಮ್ಮ…
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ…
ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಧನಗಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕರ್ನಾಟಕ ಗೃಹ ಮಂಡಳಿ (ಕೆಹೆಚ್ಬಿ) ಬಡಾವಣೆಗೆ ಕುಡಿಯುವ ನೀರು ಸರಬರಾಜು…