ರಾಜ್ಯ

ನಾಯಕತ್ವ ಬದಲಾವಣೆ ಪ್ರಸಾಪವೇ ಇಲ್ಲ : ಪ್ರಶ್ನೆಗಳೇಕೆ? ; ಮಾಧ್ಯಮಗಳ ವಿರುದ್ಧ ಸಚಿವ ಎಚ್‌ಸಿಎಂ ಅಸಮಾಧಾನ

ಬೆಂಗಳೂರು : ನಾಯಕತ್ವ ಬದಲಾವಣೆಯ ಕುರಿತಾಗಿ ಕಾಂಗ್ರೆಸ್ ಪಕ್ಷದ ಒಳಗೆ ಯಾವುದೇ ಪ್ರಶ್ನೆಗಳು ಏಳದಿದ್ದರೂ ನಮ್ಮ ಮಾಧ್ಯಮ ಮಿತ್ರರು ಪ್ರತಿದಿನ ಅದೇ ಪ್ರಶ್ನೆಗಳನ್ನು ಸರ್ಕಾರದ ಮುಖ್ಯಸ್ಥರು, ಸಚಿವರು ಹಾಗೂ ನಾಯಕರ ಬಳಿ ಕೇಳುತ್ತಿರುವುದು ಮುಜುಗರ ತರುವಂತಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ತಮ್ಮ ಸಾಮಾಜಿಕ ಜಾಲ ತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಸರ್ಕಾರವೊಂದು ತಾನು ಜನರಿಗೆ ನೀಡಿದ ಪ್ರಣಾಳಿಕೆಗಳನ್ನು ಸಮರ್ಥವಾಗಿ ಜಾರಿಗೊಳಿಸಿ, ಜನ ಸಾಮಾನ್ಯರ ಬದುಕು ಹಸನಾಗುವ ನಿಟ್ಟಿನಲ್ಲಿ ಆಡಳಿತವನ್ನು ನೀಡುತ್ತಿರುವಾಗ, ಆಡಳಿತಾತ್ಮಕ ಸ್ಥಿರತೆ, ಜನರ ನಂಬಿಕೆಗೆ ವಿರುದ್ಧವಾಗಿ, ಜನರನ್ನು ಗೊಂದಲಗೊಳಿಸುವ ಹಾಗೆ ಪ್ರತಿದಿನ ಕೇಳುತ್ತಿರುವ ಪ್ರಶ್ನೆಗಳು ಆಡಳಿತಾತ್ಮಕ ದೃಷ್ಟಿಯಿಂದ ಅಷ್ಟೊಂದು ಸಮಂಜಸವಾಗಿ ಕಾಣುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ:-ಕೋಲ್ಕತ್ತ | ಭೂಕಂಪನ : ತೀವ್ರತೆಗೆ ಪೂರ್ವ ಭಾರತದ ಹಲವೆಡೆ ಕಂಪಿಸಿದ ಭೂಮಿ

ಒಂದು ರಾಜಕೀಯ ಪಕ್ಷವು ಕಾಲದ ಅಗತ್ಯಕ್ಕೆ ತಕ್ಕಂತೆ, ಜನರ ಅಭಿಪ್ರಾಯವನ್ನು ಆಧರಿಸಿ, ನಾಯಕರ ಸಾಮರ್ಥ್ಯವನ್ನು ಅರ್ಥೈಸಿ ಪಕ್ಷದ ವ್ಯಾಪ್ತಿಯ ಒಳಗೆ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ಇದು ಯಾವುದೇ ಬಹಿರಂಗ ಒತ್ತಡದಿಂದ ಅಥವಾ ವ್ಯಕ್ತಿಗತ ಆಸೆಗಳಿಂದ ಜರುಗುವಂತಹ ಪ್ರಕ್ರಿಯೆ ಅಲ್ಲ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.

ನಾಯಕತ್ವ ಬದಲಾವಣೆಯ ನಿರ್ಧಾರ ಏನಾದರೂ ಇದ್ದರೆ ಅದನ್ನು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮಾಧ್ಯಮದ ಮುಂದೆಯೇ ಬಂದು ತಿಳಿಸುತ್ತದೆ. ಹೀಗಾಗಿ ಹೋದಲ್ಲಿ ಬಂದಲ್ಲಿ ರಚ್ಚೆ ಹಿಡಿದವರಂತೆ ನಾಯಕತ್ವ ಬದಲಾವಣೆಯ ಪ್ರಶ್ನೆಯನ್ನು ಕೇಳುವ ಬದಲು, ಜನರ ನಂಬಿಕೆಯನ್ನು ಹೆಚ್ಚಿಸುವಂತಹ ಮತ್ತು ಜನರ ಬದುಕಿಗೆ ಪ್ರಯೋಜನ ಆಗುವಂತಹ ಮತ್ತು ಆಡಳಿತಾತ್ಮಕವಾಗಿ ಸರ್ಕಾರವನ್ನು ಎಚ್ಚರಿಸುವ ಕೆಲಸವನ್ನು ಮಾಡಬೇಕು ಎಂದು ಮಾಧ್ಯಮ ಮಿತ್ರರನ್ನು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

3 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

3 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

3 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

3 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

3 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago