ರಾಜ್ಯ

ನಾಯಕತ್ವ ಬದಲಾವಣೆ ಪ್ರಸಾಪವೇ ಇಲ್ಲ : ಪ್ರಶ್ನೆಗಳೇಕೆ? ; ಮಾಧ್ಯಮಗಳ ವಿರುದ್ಧ ಸಚಿವ ಎಚ್‌ಸಿಎಂ ಅಸಮಾಧಾನ

ಬೆಂಗಳೂರು : ನಾಯಕತ್ವ ಬದಲಾವಣೆಯ ಕುರಿತಾಗಿ ಕಾಂಗ್ರೆಸ್ ಪಕ್ಷದ ಒಳಗೆ ಯಾವುದೇ ಪ್ರಶ್ನೆಗಳು ಏಳದಿದ್ದರೂ ನಮ್ಮ ಮಾಧ್ಯಮ ಮಿತ್ರರು ಪ್ರತಿದಿನ ಅದೇ ಪ್ರಶ್ನೆಗಳನ್ನು ಸರ್ಕಾರದ ಮುಖ್ಯಸ್ಥರು, ಸಚಿವರು ಹಾಗೂ ನಾಯಕರ ಬಳಿ ಕೇಳುತ್ತಿರುವುದು ಮುಜುಗರ ತರುವಂತಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ತಮ್ಮ ಸಾಮಾಜಿಕ ಜಾಲ ತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಸರ್ಕಾರವೊಂದು ತಾನು ಜನರಿಗೆ ನೀಡಿದ ಪ್ರಣಾಳಿಕೆಗಳನ್ನು ಸಮರ್ಥವಾಗಿ ಜಾರಿಗೊಳಿಸಿ, ಜನ ಸಾಮಾನ್ಯರ ಬದುಕು ಹಸನಾಗುವ ನಿಟ್ಟಿನಲ್ಲಿ ಆಡಳಿತವನ್ನು ನೀಡುತ್ತಿರುವಾಗ, ಆಡಳಿತಾತ್ಮಕ ಸ್ಥಿರತೆ, ಜನರ ನಂಬಿಕೆಗೆ ವಿರುದ್ಧವಾಗಿ, ಜನರನ್ನು ಗೊಂದಲಗೊಳಿಸುವ ಹಾಗೆ ಪ್ರತಿದಿನ ಕೇಳುತ್ತಿರುವ ಪ್ರಶ್ನೆಗಳು ಆಡಳಿತಾತ್ಮಕ ದೃಷ್ಟಿಯಿಂದ ಅಷ್ಟೊಂದು ಸಮಂಜಸವಾಗಿ ಕಾಣುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ:-ಕೋಲ್ಕತ್ತ | ಭೂಕಂಪನ : ತೀವ್ರತೆಗೆ ಪೂರ್ವ ಭಾರತದ ಹಲವೆಡೆ ಕಂಪಿಸಿದ ಭೂಮಿ

ಒಂದು ರಾಜಕೀಯ ಪಕ್ಷವು ಕಾಲದ ಅಗತ್ಯಕ್ಕೆ ತಕ್ಕಂತೆ, ಜನರ ಅಭಿಪ್ರಾಯವನ್ನು ಆಧರಿಸಿ, ನಾಯಕರ ಸಾಮರ್ಥ್ಯವನ್ನು ಅರ್ಥೈಸಿ ಪಕ್ಷದ ವ್ಯಾಪ್ತಿಯ ಒಳಗೆ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ಇದು ಯಾವುದೇ ಬಹಿರಂಗ ಒತ್ತಡದಿಂದ ಅಥವಾ ವ್ಯಕ್ತಿಗತ ಆಸೆಗಳಿಂದ ಜರುಗುವಂತಹ ಪ್ರಕ್ರಿಯೆ ಅಲ್ಲ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.

ನಾಯಕತ್ವ ಬದಲಾವಣೆಯ ನಿರ್ಧಾರ ಏನಾದರೂ ಇದ್ದರೆ ಅದನ್ನು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮಾಧ್ಯಮದ ಮುಂದೆಯೇ ಬಂದು ತಿಳಿಸುತ್ತದೆ. ಹೀಗಾಗಿ ಹೋದಲ್ಲಿ ಬಂದಲ್ಲಿ ರಚ್ಚೆ ಹಿಡಿದವರಂತೆ ನಾಯಕತ್ವ ಬದಲಾವಣೆಯ ಪ್ರಶ್ನೆಯನ್ನು ಕೇಳುವ ಬದಲು, ಜನರ ನಂಬಿಕೆಯನ್ನು ಹೆಚ್ಚಿಸುವಂತಹ ಮತ್ತು ಜನರ ಬದುಕಿಗೆ ಪ್ರಯೋಜನ ಆಗುವಂತಹ ಮತ್ತು ಆಡಳಿತಾತ್ಮಕವಾಗಿ ಸರ್ಕಾರವನ್ನು ಎಚ್ಚರಿಸುವ ಕೆಲಸವನ್ನು ಮಾಡಬೇಕು ಎಂದು ಮಾಧ್ಯಮ ಮಿತ್ರರನ್ನು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

2 mins ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

1 hour ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

7 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

14 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

14 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

14 hours ago