ರಾಜ್ಯ

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು ಶೀಘ್ರವಾಗಿ ಬಗೆ ಹರಿಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ಗೊಂದಲಗಳೇ ಇಲ್ಲ. ಖರ್ಗೆ ಅವರು ಹೇಳಿಕೆ ನೀಡಿದ್ದರೆ ಅವರ ಬಳಿಯೇ ಸ್ಪಷ್ಟನೆ ಕೇಳಿ ಎಂದು ಮಾರ್ನುಡಿದರು.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ಬೇಸಿಗೆ ಭೀಕರವಾಗಿತ್ತು. ಹೆಚ್ಚು ಮಳೆ ಬರಬೇಕೆಂದು ಈಗಲೂ ದೇವರಿಗೆ ಕೈ ಮುಗಿದು ಪ್ರಾರ್ಥಿಸುತ್ತೇನೆ. ಮಳೆಯಿಂದ ಎದುರಾಗುವ ಸಮಸ್ಯೆಗಳನ್ನು ನಿವಾರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುತ್ತೇವೆ. ಮುಂದಿನ ದಿನಗಳಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ ಇದೆ. ಶರಾವತಿಯಲ್ಲಿ ನೀರಿನ ಕೊರತೆಯಾದರೆ ವಿದ್ಯುತ್ ಉತ್ಪಾದನೆ ಸಮಸ್ಯೆಯಾಗುತ್ತಿದೆ ಎಂದರು.

ಮೇ.3ರಂದು ನಾನು ತುಂಗಾಭದ್ರ ಭಾಗದ ಪರಿಶೀಲನೆಗೆ ಪ್ರವಾಸ ಕೈಗೊಳ್ಳುತ್ತಿದ್ದೇನೆ. ಕಾವೇರಿ ನದಿಯಿಂದ ತಮಿಳುನಾಡಿಗೆ 177 ಟಿಎಂಸಿ ನೀರು ಬಿಡಲು ಆದೇಶವಾಗಿದೆ. ಈ ಕಾರಣಕ್ಕೆ ಮಳೆಯಾದಷ್ಟು ಉತ್ತಮ ಎಂದರು.

ರಸ್ತೆಗಳಲ್ಲಿ ಹಳೆಯ ಮರದ ಕೊಂಬೆಗಳಿದ್ದರೆ ಅವುಗಳನ್ನು ಪೊಲೀಸರು ಮತ್ತು ಪಾಲಿಕೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ಮೂಲಕ ತೆರವುಗೊಳಿಸಲಿದ್ದಾರೆ. ಈಗಾಗಲೇ ಹಳೆಯ ಕೊಂಬೆಗಳನ್ನು ಪಟ್ಟಿ ಮಾಡಲಾಗುತ್ತಿದೆ. ಸಹಾಯವಾಣಿ ಆರಂಭವಾಗಿದೆ. ಅಧಿಕಾರಿಗಳು ಸಮಸ್ಯೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದರು.

ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಇಂದು ವಿಧಾನಸಭೆಯಲ್ಲಿ ಬೆಂಗಳೂರು ಪಾಲಿಕೆ ಅಧಿಕಾರಿಗಳ ಸಭೆ ನಡೆಸಿ, ಅಗತ್ಯ ಸಲಹೆ ಸೂಚನೆ ನೀಡಲಾಗುವುದು ಎಂದರು.

ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿಗೆ ಹೊಂದಿಕೊಂಡತಹ ಕಾಂಪೌಂಡ್ ಕುಸಿತವಾಗಿರುವುದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಎಂದು ಹೇಳಲು ನಾನು ಬಯಸುವುದಿಲ್ಲ. ಗೋಡೆಯ ಹಿಂದೆ ಮಣ್ಣು ತುಂಬಿದ್ದರು. ಅದರ ಒತ್ತಡದಿಂದಾಗಿ ಕಾಂಪೌಂಡ್ ಕುಸಿದಿದೆ. ಗೋಡೆಯ ಪಕ್ಕದಲ್ಲಿ ಇನ್ನು ಮುಂದೆ ಅಲ್ಲಿ ಕೂರಿಸಬಾರದು ಎಂದು ನಿನ್ನೆ ರಾತ್ರಿಯೇ ಆದೇಶ ನೀಡಿದ್ದೇನೆ. ಅದಷ್ಟೇ ಅಲ್ಲ ಯಾವುದೇ ಭಾಗದಲ್ಲಾದರೂ ಶಿಥಿಲಗೋಡೆಗಳ ಬಳಿ ಬೀದಿ ಬದಿ ವ್ಯಾಪಾರಿಗಳನ್ನು ಕೂರಿಸಬಾರದು ಎಂದು ಸೂಚನೆ ನೀಡಿರುವುದಾಗಿ ತಿಳಿಸಿದರು.

 

ಆಂದೋಲನ ಡೆಸ್ಕ್

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

2 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

3 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

3 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

3 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

3 hours ago

ಪ್ರೀ ವೆಡ್ಡಿಂಗ್‌ ಶೂಟ್‌ಗೆ ಹೋಗುತ್ತಿದ್ದ ವೇಳೆ ಕಾರು ಅಪಘಾತ: ಯುವಕ ಸಾವು

ಹಾಸನ: 10 ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಯುವಕನೋರ್ವ ಪ್ರೀ ವೆಡ್ಡಿಂಗ್‌ ಶೂಟ್‌ಗೆ ಹೂಗುತ್ತಿದ್ದ ವೇಳೆ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಟ್ಟಿರುವ…

3 hours ago