N. Chaluvaraya Swamy
ಬಳ್ಳಾರಿ: ರಾಜ್ಯದಲ್ಲಿ ಯಾವುದೇ ನವೆಂಬರ್ ಕ್ರಾಂತಿ ಆಗಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿರುವ ನವೆಂಬರ್ ಕ್ರಾಂತಿ ಬಗ್ಗೆ ಬಳ್ಳಾರಿಯಲ್ಲಿಂದು ಮಾಧ್ಯಮದವರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನೋಡಿ ಈಗಾಗಲೇ ನವೆಂಬರ್ ಮುಗಿಯುತ್ತ ಬಂದಿದೆ. ಆದ್ದರಿಂದ ಯಾವ ಕ್ರಾಂತಿಯೂ ಆಗಲ್ಲ. ಸಿಎಂ ಬದಲಾವಣೆ ವಿಚಾರ ಪಕ್ಷದ ಹೈಕಮಾಂಡ್ಗೆ ಬಿಟ್ಟ ವಿಚಾರ. ಏನೇ ಇದ್ದರೂ ನಮ್ಮ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮ ಕಾಂಗ್ರೆಸ್ ಪಕ್ಷ ಬಿಜೆಪಿ ಪಕ್ಷದ ತರ ಅಲ್ಲ. ನಮ್ಮ ಪಾಡಿಗೆ ನಾವು ಕೆಲಸ ಮಾಡುತ್ತಾ ಇದ್ದೇವೆ. ಬಿಹಾರ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೊದಲೇ ಪ್ರಚಾರ ಮಾಡಿ ಬಂದಿದ್ದರು. ಆ ಬಳಿಕ ಡಿಸಿಎಂ ಹೋದ್ರು, ಅವರು ಪಕ್ಷದ ಅಧ್ಯಕ್ಷರು ಹೀಗಾಗಿ ಪದೇ ಪದೇ ಹೋಗುತ್ತಾರೆ ಎಂದು ಹೇಳಿದರು.
ಇನ್ನು ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ನಿನ್ನೆಯೇ ತೀರ್ಮಾನ ಆಗಿದೆ. ನಿನ್ನೆಯೇ ರೈತರು ಪ್ರತಿಭಟನೆ ವಾಪಸ್ ಪಡೆದಿದ್ದಾರೆ. ಕೆಲವು ಕಡೆ ಅಷ್ಟೇ ಸ್ವಲ್ಪ ಪ್ರತಿಭಟನೆ ಇರಬಹುದು. ಸಿಎಂ ನಿನ್ನೆ ನಿರಂತರವಾಗಿ ಮಾಲೀಕರ ಹಾಗೂ ರೈತರ ಜೊತೆ ಮಾತಾಡಿದ್ದಾರೆ. 3250 ರೂ ಕಾರ್ಖಾನೆ ಕೊಡಬೇಕು, 50 ರೂಪಾಯಿ ಸರ್ಕಾರ ಕೊಡುತ್ತೆ ಎಂದು ತೀರ್ಮಾನ ಆಗಿದೆ ಎಂದು ನಿನ್ನೆಯ ಸಿಎಂ ಸಿದ್ದರಾಮಯ್ಯ ಸಭೆ ಬಗ್ಗೆ ಮಾಹಿತಿ ನೀಡಿದರು.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…