N. Chaluvaraya Swamy
ಬಳ್ಳಾರಿ: ರಾಜ್ಯದಲ್ಲಿ ಯಾವುದೇ ನವೆಂಬರ್ ಕ್ರಾಂತಿ ಆಗಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ.
ರಾಜ್ಯದಲ್ಲಿ ಭಾರೀ ಚರ್ಚೆಯಲ್ಲಿರುವ ನವೆಂಬರ್ ಕ್ರಾಂತಿ ಬಗ್ಗೆ ಬಳ್ಳಾರಿಯಲ್ಲಿಂದು ಮಾಧ್ಯಮದವರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನೋಡಿ ಈಗಾಗಲೇ ನವೆಂಬರ್ ಮುಗಿಯುತ್ತ ಬಂದಿದೆ. ಆದ್ದರಿಂದ ಯಾವ ಕ್ರಾಂತಿಯೂ ಆಗಲ್ಲ. ಸಿಎಂ ಬದಲಾವಣೆ ವಿಚಾರ ಪಕ್ಷದ ಹೈಕಮಾಂಡ್ಗೆ ಬಿಟ್ಟ ವಿಚಾರ. ಏನೇ ಇದ್ದರೂ ನಮ್ಮ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನಮ್ಮ ಕಾಂಗ್ರೆಸ್ ಪಕ್ಷ ಬಿಜೆಪಿ ಪಕ್ಷದ ತರ ಅಲ್ಲ. ನಮ್ಮ ಪಾಡಿಗೆ ನಾವು ಕೆಲಸ ಮಾಡುತ್ತಾ ಇದ್ದೇವೆ. ಬಿಹಾರ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮೊದಲೇ ಪ್ರಚಾರ ಮಾಡಿ ಬಂದಿದ್ದರು. ಆ ಬಳಿಕ ಡಿಸಿಎಂ ಹೋದ್ರು, ಅವರು ಪಕ್ಷದ ಅಧ್ಯಕ್ಷರು ಹೀಗಾಗಿ ಪದೇ ಪದೇ ಹೋಗುತ್ತಾರೆ ಎಂದು ಹೇಳಿದರು.
ಇನ್ನು ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ನಿನ್ನೆಯೇ ತೀರ್ಮಾನ ಆಗಿದೆ. ನಿನ್ನೆಯೇ ರೈತರು ಪ್ರತಿಭಟನೆ ವಾಪಸ್ ಪಡೆದಿದ್ದಾರೆ. ಕೆಲವು ಕಡೆ ಅಷ್ಟೇ ಸ್ವಲ್ಪ ಪ್ರತಿಭಟನೆ ಇರಬಹುದು. ಸಿಎಂ ನಿನ್ನೆ ನಿರಂತರವಾಗಿ ಮಾಲೀಕರ ಹಾಗೂ ರೈತರ ಜೊತೆ ಮಾತಾಡಿದ್ದಾರೆ. 3250 ರೂ ಕಾರ್ಖಾನೆ ಕೊಡಬೇಕು, 50 ರೂಪಾಯಿ ಸರ್ಕಾರ ಕೊಡುತ್ತೆ ಎಂದು ತೀರ್ಮಾನ ಆಗಿದೆ ಎಂದು ನಿನ್ನೆಯ ಸಿಎಂ ಸಿದ್ದರಾಮಯ್ಯ ಸಭೆ ಬಗ್ಗೆ ಮಾಹಿತಿ ನೀಡಿದರು.
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…