ರಾಜ್ಯ

ಸಿಎಂ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ; ಸಚಿವ ಎಚ್‌.ಸಿ ಮಹದೇವಪ್ಪ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ತಮಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರು ಆತ್ಮೀಯರಾಗಿದ್ದೇವೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮತ್ತು ಮುಖ್ಯಮಂತ್ರಿ ಅವರ ನಡುವೆ ಬಿನ್ನಾಭಿಪ್ರಾಯ ಇದೆ ಎಂಬುವುದು ಮಾಧ್ಯಮಗಳ ವದಂತಿ ಎಂದರು.

ಗಂಗಾಕಲ್ಯಾಣ ಯೋಜನೆಯಡಿ ವಿದ್ಯುತ್ ಸಂಪರ್ಕವನ್ನು ಸೇರಿಸಿ ಹೆಚ್ಚು ಹಣ ನೀಡಬೇಕೆಂಬುದು ಇಂಧನ ಸಚಿವ ಬೇಡಿಕೆಯಾಗಿದೆ. ಈ ಕುರಿತಂತೆ ಸಂಪುಟದಲ್ಲಿ ವಿಷಯಾಧಾರಿತ ಚರ್ಚೆ ನಡೆಯಿತು. ಯಾವುದೇ ವಾಗ್ವಾದ ಬಿನ್ನಾಭಿಪ್ರಾಯಗಳು ಇಲ್ಲ. ವಿದ್ಯುತ್ ಸಂಪರ್ಕಕ್ಕೆ 50 ಸಾವಿರಗಳಿಷ್ಟಿದ್ದ ವೆಚ್ಚವನ್ನು 75 ಸಾವಿರ ರೂ.ಗೆ ತಾವು ಹೆಚ್ಚಿಸಿದ್ದು ಮತ್ತಷ್ಟು ದರ ಹೆಚ್ಚಿಸಬೇಕೆಂದು ಇಂಧನ ಸಚಿವರ ವಾದವಾಗಿತ್ತು.

ನಗರ ಪ್ರದೇಶದಲ್ಲಿ 4.75 ಲಕ್ಷ, ಗ್ರಾಮೀಣ ಭಾಗದಲ್ಲಿ 3.75 ಲಕ್ಷಗಳನ್ನು ವಿದ್ಯುತ್ ಸಂಪರ್ಕಕ್ಕಾಗಿ ವೆಚ್ಚ ಮಾಡಲು ಎಸ್‍ಇಪಿಟಿಎಸ್‍ಪಿ ಯಡಿ ವೆಚ್ಚ ಮಾಡಲು ಅನುಮತಿಸಲಾಗಿದೆ. ಇದು ಸಾಲುವುದಿಲ್ಲ ಎಂಬುವುದು ಇಂಧನ ಇಲಾಖೆ ವಾದವಾಗಿದೆ. ಅದರ ಹೊರತು ಯಾವುದೇ ಸಂಘರ್ಷ ಇಲ್ಲ ಎಂದರು.

ಇದನ್ನು ಓದಿ: ದೇಶ ಪ್ರೇಮದ ಢೋಂಗಿ ಭಾಷಣ ಮಾಡುವ RSS, BJP : ಸಿಎಂ ಸಿದ್ದರಾಮಯ್ಯ ಟೀಕೆ 

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು ತಮ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಈಗ ಇಲ್ಲ ಸಲ್ಲದ ಟೀಕೆ ಮಾಡುತ್ತಿರುವ ಗೋವಿಂದ್ ಕಾರಜೋಳ ಸಮಾಜ ಕಲ್ಯಾಣ ಸಚಿವರಾಗಿದ್ದರು. ಎಚ್. ಆಂಜನೇಯ ಕೂಡ ಇಲಾಖೆಯ ಜವಾಬ್ದಾರಿ ನಿರ್ವಹಿಸಿದ್ದರು. ಕೇಂದ್ರದಲ್ಲಿ ಎ. ನಾರಾಯಣಸ್ವಾಮಿ ಸಚಿವರಾಗಿದ್ದಾಗ ಒಳ ಮೀಸಲಾತಿ ನೀಡಲಾಗುವುದಿಲ್ಲ ಎಂದು ಹೇಳಿಕೆ ನೀಡಿದ್ದರು.

ಅಧಿಕಾರದಲ್ಲಿದ್ದಾಗ ಒಳ ಮೀಸಲಾತಿ ಕೊಡಬೇಡಿ ಎಂದು ಅವರಿಗೆ ಯಾರು ಅಡ್ಡಿ ಪಡಿಸಿದ್ದರು. ರಾಜಕೀಯಕ್ಕಾಗಿ ಈಗ ಟೀಕೆ ಮಾಡುತ್ತಿದ್ದಾರೆ. ಅದೇನೂ ಬದನೆಕಾಯಿ ಅಲ್ಲ, ಕಿತ್ತುಕೊಡಲು ಸಂವಿಧಾನಿಕ ಹಕ್ಕು. ಅದನ್ನು ಕಾನೂನು ಬದ್ಧವಾಗಿಯೇ ಜಾರಿಗೊಳಿಸಬೇಕು ಎಂದು ಹೇಳಿದರು.

ಅಧಿಕಾರ ಹಂಚಿಕೆಯ ಬಗ್ಗೆ ನವೆಂಬರ್ 25ಕ್ಕೆ ಡಿ.ಕೆ.ಶಿವಕುಮಾರ್ ಗಡುವು ನೀಡಿದ್ದಾರೆ ಎಂಬುವುದು ನಮಗೆ ತಿಳಿದಿಲ್ಲ. ಅದು ದೊಡ್ಡವರ ಹಂತದಲ್ಲಿ ನಿರ್ಧಾರವಾಗಬೇಕು ಎಂದರು.

ದಲಿತ ಮುಖ್ಯಮಂತ್ರಿಯ ಹುದ್ದೆಯ ಬೇಡಿಕೆ ಸದಾ ಇದ್ದೇ ಇರುತ್ತದೆ. ಈ ಕುರಿತ ಹೋರಾಟ ನಿರಂತರ. ಆದರೆ ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು. ಕಾಂಗ್ರೆಸ್ ಪಕ್ಷ ದಲಿತರಿಗೆ ಅವಕಾಶ ಕೊಡುವುದಿಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಅದಕ್ಕೆ ಸೂಕ್ತ ಸಮಯ ಬರಬೇಕು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

3 mins ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

32 mins ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

58 mins ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

1 hour ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

2 hours ago