ರಾಜ್ಯ

ಸಿಎಂ ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ; ಸಚಿವ ಎಚ್‌.ಸಿ ಮಹದೇವಪ್ಪ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ತಮಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವಿಬ್ಬರು ಆತ್ಮೀಯರಾಗಿದ್ದೇವೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮತ್ತು ಮುಖ್ಯಮಂತ್ರಿ ಅವರ ನಡುವೆ ಬಿನ್ನಾಭಿಪ್ರಾಯ ಇದೆ ಎಂಬುವುದು ಮಾಧ್ಯಮಗಳ ವದಂತಿ ಎಂದರು.

ಗಂಗಾಕಲ್ಯಾಣ ಯೋಜನೆಯಡಿ ವಿದ್ಯುತ್ ಸಂಪರ್ಕವನ್ನು ಸೇರಿಸಿ ಹೆಚ್ಚು ಹಣ ನೀಡಬೇಕೆಂಬುದು ಇಂಧನ ಸಚಿವ ಬೇಡಿಕೆಯಾಗಿದೆ. ಈ ಕುರಿತಂತೆ ಸಂಪುಟದಲ್ಲಿ ವಿಷಯಾಧಾರಿತ ಚರ್ಚೆ ನಡೆಯಿತು. ಯಾವುದೇ ವಾಗ್ವಾದ ಬಿನ್ನಾಭಿಪ್ರಾಯಗಳು ಇಲ್ಲ. ವಿದ್ಯುತ್ ಸಂಪರ್ಕಕ್ಕೆ 50 ಸಾವಿರಗಳಿಷ್ಟಿದ್ದ ವೆಚ್ಚವನ್ನು 75 ಸಾವಿರ ರೂ.ಗೆ ತಾವು ಹೆಚ್ಚಿಸಿದ್ದು ಮತ್ತಷ್ಟು ದರ ಹೆಚ್ಚಿಸಬೇಕೆಂದು ಇಂಧನ ಸಚಿವರ ವಾದವಾಗಿತ್ತು.

ನಗರ ಪ್ರದೇಶದಲ್ಲಿ 4.75 ಲಕ್ಷ, ಗ್ರಾಮೀಣ ಭಾಗದಲ್ಲಿ 3.75 ಲಕ್ಷಗಳನ್ನು ವಿದ್ಯುತ್ ಸಂಪರ್ಕಕ್ಕಾಗಿ ವೆಚ್ಚ ಮಾಡಲು ಎಸ್‍ಇಪಿಟಿಎಸ್‍ಪಿ ಯಡಿ ವೆಚ್ಚ ಮಾಡಲು ಅನುಮತಿಸಲಾಗಿದೆ. ಇದು ಸಾಲುವುದಿಲ್ಲ ಎಂಬುವುದು ಇಂಧನ ಇಲಾಖೆ ವಾದವಾಗಿದೆ. ಅದರ ಹೊರತು ಯಾವುದೇ ಸಂಘರ್ಷ ಇಲ್ಲ ಎಂದರು.

ಇದನ್ನು ಓದಿ: ದೇಶ ಪ್ರೇಮದ ಢೋಂಗಿ ಭಾಷಣ ಮಾಡುವ RSS, BJP : ಸಿಎಂ ಸಿದ್ದರಾಮಯ್ಯ ಟೀಕೆ 

ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು ತಮ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಈಗ ಇಲ್ಲ ಸಲ್ಲದ ಟೀಕೆ ಮಾಡುತ್ತಿರುವ ಗೋವಿಂದ್ ಕಾರಜೋಳ ಸಮಾಜ ಕಲ್ಯಾಣ ಸಚಿವರಾಗಿದ್ದರು. ಎಚ್. ಆಂಜನೇಯ ಕೂಡ ಇಲಾಖೆಯ ಜವಾಬ್ದಾರಿ ನಿರ್ವಹಿಸಿದ್ದರು. ಕೇಂದ್ರದಲ್ಲಿ ಎ. ನಾರಾಯಣಸ್ವಾಮಿ ಸಚಿವರಾಗಿದ್ದಾಗ ಒಳ ಮೀಸಲಾತಿ ನೀಡಲಾಗುವುದಿಲ್ಲ ಎಂದು ಹೇಳಿಕೆ ನೀಡಿದ್ದರು.

ಅಧಿಕಾರದಲ್ಲಿದ್ದಾಗ ಒಳ ಮೀಸಲಾತಿ ಕೊಡಬೇಡಿ ಎಂದು ಅವರಿಗೆ ಯಾರು ಅಡ್ಡಿ ಪಡಿಸಿದ್ದರು. ರಾಜಕೀಯಕ್ಕಾಗಿ ಈಗ ಟೀಕೆ ಮಾಡುತ್ತಿದ್ದಾರೆ. ಅದೇನೂ ಬದನೆಕಾಯಿ ಅಲ್ಲ, ಕಿತ್ತುಕೊಡಲು ಸಂವಿಧಾನಿಕ ಹಕ್ಕು. ಅದನ್ನು ಕಾನೂನು ಬದ್ಧವಾಗಿಯೇ ಜಾರಿಗೊಳಿಸಬೇಕು ಎಂದು ಹೇಳಿದರು.

ಅಧಿಕಾರ ಹಂಚಿಕೆಯ ಬಗ್ಗೆ ನವೆಂಬರ್ 25ಕ್ಕೆ ಡಿ.ಕೆ.ಶಿವಕುಮಾರ್ ಗಡುವು ನೀಡಿದ್ದಾರೆ ಎಂಬುವುದು ನಮಗೆ ತಿಳಿದಿಲ್ಲ. ಅದು ದೊಡ್ಡವರ ಹಂತದಲ್ಲಿ ನಿರ್ಧಾರವಾಗಬೇಕು ಎಂದರು.

ದಲಿತ ಮುಖ್ಯಮಂತ್ರಿಯ ಹುದ್ದೆಯ ಬೇಡಿಕೆ ಸದಾ ಇದ್ದೇ ಇರುತ್ತದೆ. ಈ ಕುರಿತ ಹೋರಾಟ ನಿರಂತರ. ಆದರೆ ಹೈಕಮಾಂಡ್ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು. ಕಾಂಗ್ರೆಸ್ ಪಕ್ಷ ದಲಿತರಿಗೆ ಅವಕಾಶ ಕೊಡುವುದಿಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಅದಕ್ಕೆ ಸೂಕ್ತ ಸಮಯ ಬರಬೇಕು ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

6 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

7 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago