There is no financial shortage in the government Minister G Parameshwara
ಬೆಂಗಳೂರು: ನಮ್ಮ ಬಳಿ ದುಡ್ಡಿಲ್ಲ. ಸಿದ್ದರಾಮಯ್ಯ ಬಳಿ ದುಡ್ಡಿಲ್ಲ ಎಂದು ಹೇಳಿಕೆ ನೀಡಿದ್ದ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ಸ್ಪಷ್ಟನೆ ನೀಡಿದ್ದು, ಸರ್ಕಾರದಲ್ಲಿ ಹಣಕಾಸಿನ ಕೊರತೆಯಿಲ್ಲ ಎಂದು ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದಲ್ಲಿ ಹಣಕಾಸಿನ ತೊಂದರೆಯಿಲ್ಲ. ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಹಣ ಕೊಟ್ಟಿದ್ದಾರೆ. ಅವರು ಯಾರೋ ತಮಾಷೆಗೆ ಕೇಳಿದ್ರು ಎಂದು ನಾನು ತಮಾಷೆಯಾಗಿ ಮಾತನಾಡಿದ್ದೆ. ಆದರೆ ಅದು ಬರೀ ತಮಾಷೆಯಷ್ಟೇ. ನಮ್ಮ ಸರ್ಕಾರದಲ್ಲಿ ಹಣದ ಕೊರತೆಯಿಲ್ಲ. ಆದರೆ ಬಿಡುಗಡೆ ಆಗುವಾಗ ಸ್ವಲ್ಪ ವಿಳಂಬವಾಗುತ್ತದೆ. ನನ್ನ ಹೇಳಿಕೆ ಬಗ್ಗೆ ತಪ್ಪು ಕಲ್ಪನೆ ಬೇಡ. ನಾನು ಸರ್ಕಾರದ ಬಳಿ ಹಣವಿಲ್ಲ ಎಂದು ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರು.
ಇನ್ನು ಬಾಗಲಕೋಟೆಯಲ್ಲಿ ನಿನ್ನೆ ಮಾತನಾಡಿದ್ದ ಗೃಹ ಸಚಿವ ಪರಮೇಶ್ವರ್ ಅವರು, ಬಾದಾಮಿ ಅಭಿವೃದ್ಧಿಗೆ ಒಂದು ಯೋಜನೆ ಸಿದ್ಧಮಾಡಿ ಕೇಂದ್ರಕ್ಕೆ ಕಳುಹಿಸಿಕೊಡಿ. ಯಾಕೆಂದರೆ ನಮ್ಮ ಬಳಿ ಹಣವಿಲ್ಲ. ಸಿದ್ದರಾಮಣ್ಣನ ಬಳಿ ದುಡ್ಡಿಲ್ಲ ಎಂದು ಹೇಳಿದ್ದರು. ಗೃಹ ಸಚಿವ ಪರಮೇಶ್ವರ್ ಹೇಳಿಕೆಗೆ ವಿಪಕ್ಷ ನಾಯಕರು ಕಿಡಿಕಾರಿದ್ದು, ರಾಜ್ಯ ಸರ್ಕಾರದ ಬೊಕ್ಕಸ ಸಂಪೂರ್ಣ ಖಾಲಿಯಾಗಿದೆ. ಇದನ್ನು ಪರಮೇಶ್ವರ್ ಅವರೇ ಒಪ್ಪಿಕೊಂಡಿದ್ದಾರೆ ಎಂದು ಲೇವಡಿ ಮಾಡಿದ್ದರು.
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ…