Mysore
30
few clouds

Social Media

ಸೋಮವಾರ, 02 ಫೆಬ್ರವರಿ 2026
Light
Dark

ಕರ್ನಾಟಕ ಬಂದ್‌ಗೆ ಸರ್ಕಾರದ ಬೆಂಬಲ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮಾರ್ಚ್.‌22ರಂದು ಕನ್ನಡ ಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್‌ಗೆ ಸರ್ಕಾರದ ಬೆಂಬಲ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಈ ಬಗ್ಗೆ ವಿಧಾನಪರಿಷತ್‌ ಕಲಾಪದಲ್ಲಿ ಮಾತನಾಡಿದ ಅವರು, ಮಾರ್ಚ್.‌22ರಂದು ಕನ್ನಡ ಸಂಘಟನೆಗಳು ಬಂದ್‌ಗೆ ಕರೆ ಕೊಟ್ಟಿದ್ದಾರೆ. ಮಾರ್ಚ್.‌22ರಂದು ಎಸ್‌ಎಸ್‌ ಎಲ್‌ಸಿ ಸೇರಿದಂತೆ ಅನೇಕ ಪರೀಕ್ಷೆಗಳು ನಡೆಯಲಿವೆ. ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರಿಂದ ಮಕ್ಕಳೂ ಭಯಭೀತರಾಗಿದ್ದರು. ಆದ್ದರಿಂದ ಸರ್ಕಾರ ಕರ್ನಾಟಕ ಬಂದ್‌ಗೆ ಬೆಂಬಲ ನೀಡಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ಮಾರ್ಚ್.‌22ರಂದು ಕರ್ನಾಟಕ ಬಂದ್‌ ಮಾಡುವ ಅವಶ್ಯಕತೆ ಇರಲಿಲ್ಲ. ಸಂಘಟನೆಗಳು ಸರ್ಕಾರದ ಜೊತೆ ಮಾತನಾಡಬೇಕಿತ್ತು. ಆದ್ದರಿಂದ ಬಂದ್‌ಗೆ ನಾವು ಬೆಂಬಲ ಕೊಡಲ್ಲ. ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಮತ್ತೊಮ್ಮೆ ಹೇಳಿಕೆ ನೀಡುತ್ತೇನೆ ಎಂದರು.

 

Tags:
error: Content is protected !!