ಮಾಡಿದ್ದುಣ್ಣೋ ಮಾರಾಯ- ಲಕ್ಷ್ಮೀ ಹೆಬ್ಬಾಳಕರ್ ಲೇವಡಿ
ಬೆಳಗಾವಿ: ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನ ಅವರ ಬಂಧನದ ಹಿಂದೆ ಯಾವುದೇ ದ್ವೇಷ ರಾಜಕಾರಣವಿಲ್ಲ; ಅವರಿಗೀಗ ಮಾಡಿದ್ದುಣ್ಣೋ ಮಾರಾಯ ಎಂಬಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಲೇವಡಿ ಮಾಡಿದ್ದಾರೆ.
ಬೆಳಗಾವಿಯಲ್ಲಿ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಶಾಸಕ ಮನಿರತ್ನ ಅವರ ವಿಚಾರದಲ್ಲಿ ಯಾರು ದ್ವೇಷ ರಾಜಕಾರಣ ಮಾಡುತ್ತಾರೆ? ಅವರು ಮಾಡಿರುವುದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ನಾಯಕರೇನು ಮುನಿರತ್ನ ಅವರಿಗೆ ಕೆಟ್ಟ ಮಾತುಗಳಿಂದ ಬೈಯಿರಿ, ಅಥವಾ ಬ್ಲಾಕ್ ಮೇಲ್ ಮಾಡಿ ಎಂದು ಹೇಳಿದ್ದಾರಾ? ಮಾಡಿದ್ದುಣ್ಣೋ ಮಾರಾಯ ಎನ್ನುವಂತಾಗಿದೆ ಅವರ ಸ್ಥಿತಿ ಎಂದು ಕಿಡಿಕಾರಿದರು.
ಮಾತಿಗೆ ಕನ್ನಡಿ ಹಿಡಿಯುವ ಅವಶ್ಯತೆ ಇಲ್ಲ
ಕೆಲ ರಾಜಕಾರಣಗಳು ಮೊದಲು ಕೆಟ್ಟದಾಗಿ ಮಾತನಾಡುತ್ತಾರೆ; ಆಮೇಲೆ ತಿರುಚಿದ್ದಾರೆ, ದ್ವೇಷದ ರಾಜಕಾರಣ ಎಂದೆಲ್ಲ ಹೇಳುತ್ತಾರೆಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕೆಲವೊಬ್ಬರು ಮಾತನಾಡುತ್ತಾರೆ ನಿಜ; ಆದರೆ, ಅದನ್ನು ಪ್ರಮಾಣಿಕರಿಸಿ ನೋಡಬೇಕು. ಆದರೆ, ಮುನಿರತ್ನ ವಿಚಾರದಲ್ಲಿ ಏನಿದೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಇದಕ್ಕೆ ಕನ್ನಡಿ ಹಿಡಿಯುವ ಅವಶ್ಯಕತೆ ಇಲ್ಲ ಎಂದು ಸಚಿವರು ಹೇಳಿದರು.
ಮುನಿರತ್ನ ಅವರು ಮಹಿಳೆಯರ ಬಗ್ಗೆ ಆಡಿರುವ ಕೀಳು ಮಾತುಗಳನ್ನು ಯಾರೂ ಕೂಡ ಸಹಿಸಲು ಸಾಧ್ಯವಿಲ್ಲ. ಜಾತಿ, ಜಾತಿಗಳ ಮಧ್ಯೆ ಸಂಘರ್ಷ ತರುವಂತಹ ಮಾತುಗಳನ್ನು ಯಾರೂ ಕೂಡ ಆಡಬಾರದೆಂದು ಸಚಿವರು ಇದೇ ವೇಳೆ ಕಿವಿಮಾತು ಹೇಳಿದರು.
ಮಾನವ ಸರಪಳಿಯಲ್ಲಿ 1.50 ಲಕ್ಷ ಇಲಾಖಾ ನೌಕರರು ಭಾಗಿ
ರಾಜ್ಯ ಸರ್ಕಾರ ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೀದರ್ ನಿಂದ ಚಾಮರಾಜನಗರದವರೆಗೆ ಆಯೋಜಿಸಿದ್ದ ಮಾನವ ಸರಪಳಿ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿದೆ. ಮಾನವೀಯ ಮೌಲ್ಯಗಳ ಸಾಕಾರಗೊಳಿಸುವ ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ನೌಕರವರ್ಗ ಭಾಗವಹಿಸಿದ್ದು ಹೆಮ್ಮೆ ಎನಿಸಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.
ಹೇಮಂತ್ ಕುಮಾರ್ ಕಾಶಿ ನಂತರ ಸ್ಮಶಾನವಾಸಿ ಶಿವನ ದೇವಸ್ಥಾನವೆಂಬ ಹೆಗ್ಗಳಿಕೆ ಮಂಡ್ಯ: ದೇಶದಲ್ಲೇ ಭಸ್ಮೋದ್ಧಾರಿಯಾದ ಶಿವ ಸ್ಮಶಾನವಾಸಿಯಾಗಿರುವ ದೇವಾಲಯ ಕಾಶಿ…
ನವೀನ್ ಡಿಸೋಜ ವೈದ್ಯಕೀಯ ಶಿಕ್ಷಣ ಇಲಾಖೆ ಆಡಳಿತಕ್ಕೊಳಪಟ್ಟ ಬಳಿಕ ಸೇವೆಯೊಂದಿಗೆ ಶುಲ್ಕವೂ ಹೆಚ್ಚಳ; ಪ್ರತಿಯೊಂದು ಸೇವೆಗೂ ಪಾವತಿ ಮಾಡಬೇಕಾದ ಅನಿವಾರ್ಯತೆ …
ಮಹದೇಶ್ ಎಂ.ಗೌಡ ಹನೂರು ತಾಲ್ಲೂಕಿನ ಹಲವು ಶಾಲೆಗಳಲ್ಲಿ ದುರಸ್ತಿಗೆ ಬಂದಿರುವ, ವಿಮೆ ಇಲ್ಲದ ವಾಹನಗಳ ಬಳಕೆ; ಸಾರ್ವಜನಿಕರಲ್ಲಿ ಆತಂಕ ಹನೂರು:…
ಕೆ.ಬಿ.ರಮೇಶ ನಾಯಕ ಕಸ ಎಸೆಯುತ್ತಿದ್ದ ಸ್ಥಳಗಳಲ್ಲಿ ಮನರಂಜನಾ ವಸ್ತುಗಳ ಚಿತ್ತಾಕರ್ಷಣೆ ರಸ್ತೆ ಬದಿ ಕಸ ಹಾಕುವವರ ಮನ ಪರಿವರ್ತನೆಗೆ ವಿನೂತನ…
ಎಂ.ಅನುಚೇತನ್ ಸಂಚಾರಕ್ಕೆ ಅಡಚಣೆ,ಆರೋಗ್ಯಕ್ಕೆ ಕುತ್ತು, ಶಾಲಾ ಮಕ್ಕಳು, ಸ್ಥಳೀಯರು ಹೈರಾಣ ಮೈಸೂರು: ಮೈಸೂರಿನಲ್ಲಿ ಕುಡಿಯುವ ನೀರಿನ ಬರ ನೀಗಿಸುವ ಸಲುವಾಗಿ,…
ಮಹದೇಶ್ ಎಂ.ಗೌಡ ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಅಂತರ್ಜಲ ಕುಸಿತ; ಫ್ಲೋರೈಡ್ ಯುಕ್ತ ನೀರು ಸೇವಿಸಿ ಆರೋಗ್ಯ ಸಮಸ್ಯೆ ಎನ್ನುವ ಸ್ಥಳೀಯರು…