ರಾಜ್ಯ

ಕೋವಿಡ್‌ಗೂ ಹೃದಯಾಘಾತಕ್ಕೂ ಸಂಬಂಧವೇ ಇಲ್ಲ: ಸಚಿವ ಶರಣ ಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತಗಳಿಗೆ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು. ವ್ಯಾಯಾಮ, ಪ್ರಾಣಾಯಾಮ, ಆಹಾರಪದ್ಧತಿ ಹಾಗೂ ಜೀವನ ಶೈಲಿಯನ್ನು ಬದಲಾವಣೆ ಮಾಡಿದರೆ ಯಾವುದೇ ಸಮಸ್ಯೆ ಬರುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಜನತೆಗೆ ಧೈರ್ಯ ತುಂಬಿದ್ದಾರೆ.

ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಅವರ ಪ್ರಶ್ನೆ ಉತ್ತರಿಸಿದ ಅವರು, ಇತ್ತೀಚೆಗೆ ಹೃದಯಾಘಾತ, ಪ್ರಕರಣಗಳ ಸಂಖ್ಯೆ ಹೆಚ್ಚಳದ ಆತಂಕ ಎಲ್ಲರಲ್ಲೂ ಮನೆ ಮಾಡಿದೆ. ಜಯದೇವ ಆಸ್ಪತ್ರೆಯಲ್ಲಿ ಜನರು ಪ್ರತಿನಿತ್ಯ ಬಂದು ಹೃದಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಇದರ ಪ್ರಮಾಣ ಶೇ.25ರಷ್ಟು ಏರಿಕೆಯಾಗಿದೆ ಎಂದು ಮಾಹಿತಿ ನೀಡಿದರು.

ವಿಶೇಷವಾಗಿ ಹಾಸನ ಜಿಲ್ಲೆಯಲ್ಲಿ ಹೃದಯಘಾತಗಳ ಸಂಖ್ಯೆ ಹೆಚ್ಚಳವಾಗಿದೆ ಎಂಬ ಆತಂಕ ಜನರಲ್ಲಿ ಮೂಡಿದೆ. ಇದು ತಪ್ಪು ಗ್ರಹಿಕೆ. ವಾಸ್ತವವಾಗಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಸರಾಸರಿ ಪ್ರಮಾಣದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಶೇ.5ರಿಂದ 6ರಷ್ಟು ಪ್ರಕರಣಗಳು ಹೃದಯಾಘಾತಕ್ಕೆ ಸಂಬಂಧಿಸಿದವು. ಈ ವರ್ಷವು ಇಷ್ಟೇ ಪ್ರಮಾಣದಲ್ಲಿ ಇದೆ ಎಂದು ಹೇಳಿದರು.

ಬದಲಾದ ಜೀವನಶೈಲಿ, ಅಧಿಕ ಒತ್ತಡ, ಬೊಜ್ಜು, ಮದ್ಯಪಾನ, ಧೂಮಪಾನ, ಡ್ರಗ್ಸ್ ಸೇವನೆ, ಕುಟುಂಬದ ಹಿನ್ನಲೆ ಇತ್ಯಾದಿ ಕಾರಣಗಳಿಂದ ಹೃದಯಘಾತಗಳು ಸಂಭವಿಸಿವೆ. ಯಾವುದೋ ಒಂದು ಪ್ರಕರಣವನ್ನು ಆಧಾರವಾಗಿಟ್ಟುಕೊಂಡು ಜನತೆ ಆತಂಕಕ್ಕೆ ಒಳಗಾಗಬಾರದು ಎಂದು ಸಲಹೆ ನೀಡಿದರು.

ಕೋವಿಡ್ ನಂತರ ಹೃದಯಘಾತ ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬ ಗುಮಾನಿಯೂ ಇದೆ. ವಾಸ್ತವವಾಗಿ ಇದಕ್ಕೂ ಅದಕ್ಕೂ ಸಂಬಂಧವೇ ಇಲ್ಲ. ಪ್ರತಿದಿನ ವ್ಯಾಯಾಮ, ಪ್ರಾಣಯಾಮ, ಸರಿಯಾದ ಸಮಯಕ್ಕೆ ನಿದ್ದೆ, ಒತ್ತಡ ಇಲ್ಲದಿರುವುದು, ಖಿನ್ನತೆ ಒಳಗಾಗದೆ ಸಮತೋಲನ ಕಾಯ್ದುಕೊಂಡರೆ ಯಾವುದೇ ಆರೋಗ್ಯ ಸಮಸ್ಯೆಗಳು ಬರುವುದಿಲ್ಲ ಎಂದು ಪಾಟೀಲ್ ಸಲಹೆ ಕೊಟ್ಟರು.

ಆಂದೋಲನ ಡೆಸ್ಕ್

Recent Posts

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

2 hours ago

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

2 hours ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

3 hours ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

3 hours ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

3 hours ago