ರಾಜ್ಯ

ಕೋವಿಡ್‌ಗೂ ಹೃದಯಾಘಾತಕ್ಕೂ ಸಂಬಂಧವೇ ಇಲ್ಲ: ಸಚಿವ ಶರಣ ಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತಗಳಿಗೆ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು. ವ್ಯಾಯಾಮ, ಪ್ರಾಣಾಯಾಮ, ಆಹಾರಪದ್ಧತಿ ಹಾಗೂ ಜೀವನ ಶೈಲಿಯನ್ನು ಬದಲಾವಣೆ ಮಾಡಿದರೆ ಯಾವುದೇ ಸಮಸ್ಯೆ ಬರುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಜನತೆಗೆ ಧೈರ್ಯ ತುಂಬಿದ್ದಾರೆ.

ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಅವರ ಪ್ರಶ್ನೆ ಉತ್ತರಿಸಿದ ಅವರು, ಇತ್ತೀಚೆಗೆ ಹೃದಯಾಘಾತ, ಪ್ರಕರಣಗಳ ಸಂಖ್ಯೆ ಹೆಚ್ಚಳದ ಆತಂಕ ಎಲ್ಲರಲ್ಲೂ ಮನೆ ಮಾಡಿದೆ. ಜಯದೇವ ಆಸ್ಪತ್ರೆಯಲ್ಲಿ ಜನರು ಪ್ರತಿನಿತ್ಯ ಬಂದು ಹೃದಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಇದರ ಪ್ರಮಾಣ ಶೇ.25ರಷ್ಟು ಏರಿಕೆಯಾಗಿದೆ ಎಂದು ಮಾಹಿತಿ ನೀಡಿದರು.

ವಿಶೇಷವಾಗಿ ಹಾಸನ ಜಿಲ್ಲೆಯಲ್ಲಿ ಹೃದಯಘಾತಗಳ ಸಂಖ್ಯೆ ಹೆಚ್ಚಳವಾಗಿದೆ ಎಂಬ ಆತಂಕ ಜನರಲ್ಲಿ ಮೂಡಿದೆ. ಇದು ತಪ್ಪು ಗ್ರಹಿಕೆ. ವಾಸ್ತವವಾಗಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಸರಾಸರಿ ಪ್ರಮಾಣದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಶೇ.5ರಿಂದ 6ರಷ್ಟು ಪ್ರಕರಣಗಳು ಹೃದಯಾಘಾತಕ್ಕೆ ಸಂಬಂಧಿಸಿದವು. ಈ ವರ್ಷವು ಇಷ್ಟೇ ಪ್ರಮಾಣದಲ್ಲಿ ಇದೆ ಎಂದು ಹೇಳಿದರು.

ಬದಲಾದ ಜೀವನಶೈಲಿ, ಅಧಿಕ ಒತ್ತಡ, ಬೊಜ್ಜು, ಮದ್ಯಪಾನ, ಧೂಮಪಾನ, ಡ್ರಗ್ಸ್ ಸೇವನೆ, ಕುಟುಂಬದ ಹಿನ್ನಲೆ ಇತ್ಯಾದಿ ಕಾರಣಗಳಿಂದ ಹೃದಯಘಾತಗಳು ಸಂಭವಿಸಿವೆ. ಯಾವುದೋ ಒಂದು ಪ್ರಕರಣವನ್ನು ಆಧಾರವಾಗಿಟ್ಟುಕೊಂಡು ಜನತೆ ಆತಂಕಕ್ಕೆ ಒಳಗಾಗಬಾರದು ಎಂದು ಸಲಹೆ ನೀಡಿದರು.

ಕೋವಿಡ್ ನಂತರ ಹೃದಯಘಾತ ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬ ಗುಮಾನಿಯೂ ಇದೆ. ವಾಸ್ತವವಾಗಿ ಇದಕ್ಕೂ ಅದಕ್ಕೂ ಸಂಬಂಧವೇ ಇಲ್ಲ. ಪ್ರತಿದಿನ ವ್ಯಾಯಾಮ, ಪ್ರಾಣಯಾಮ, ಸರಿಯಾದ ಸಮಯಕ್ಕೆ ನಿದ್ದೆ, ಒತ್ತಡ ಇಲ್ಲದಿರುವುದು, ಖಿನ್ನತೆ ಒಳಗಾಗದೆ ಸಮತೋಲನ ಕಾಯ್ದುಕೊಂಡರೆ ಯಾವುದೇ ಆರೋಗ್ಯ ಸಮಸ್ಯೆಗಳು ಬರುವುದಿಲ್ಲ ಎಂದು ಪಾಟೀಲ್ ಸಲಹೆ ಕೊಟ್ಟರು.

ಆಂದೋಲನ ಡೆಸ್ಕ್

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

14 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

15 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

16 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

17 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

17 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

19 hours ago