ರಾಜ್ಯ

ಕೋವಿಡ್‌ಗೂ ಹೃದಯಾಘಾತಕ್ಕೂ ಸಂಬಂಧವೇ ಇಲ್ಲ: ಸಚಿವ ಶರಣ ಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತಗಳಿಗೆ ಜನತೆ ಅನಗತ್ಯವಾಗಿ ಗೊಂದಲಕ್ಕೆ ಒಳಗಾಗಬಾರದು. ವ್ಯಾಯಾಮ, ಪ್ರಾಣಾಯಾಮ, ಆಹಾರಪದ್ಧತಿ ಹಾಗೂ ಜೀವನ ಶೈಲಿಯನ್ನು ಬದಲಾವಣೆ ಮಾಡಿದರೆ ಯಾವುದೇ ಸಮಸ್ಯೆ ಬರುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಜನತೆಗೆ ಧೈರ್ಯ ತುಂಬಿದ್ದಾರೆ.

ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಅವರ ಪ್ರಶ್ನೆ ಉತ್ತರಿಸಿದ ಅವರು, ಇತ್ತೀಚೆಗೆ ಹೃದಯಾಘಾತ, ಪ್ರಕರಣಗಳ ಸಂಖ್ಯೆ ಹೆಚ್ಚಳದ ಆತಂಕ ಎಲ್ಲರಲ್ಲೂ ಮನೆ ಮಾಡಿದೆ. ಜಯದೇವ ಆಸ್ಪತ್ರೆಯಲ್ಲಿ ಜನರು ಪ್ರತಿನಿತ್ಯ ಬಂದು ಹೃದಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದಾರೆ. ಇದರ ಪ್ರಮಾಣ ಶೇ.25ರಷ್ಟು ಏರಿಕೆಯಾಗಿದೆ ಎಂದು ಮಾಹಿತಿ ನೀಡಿದರು.

ವಿಶೇಷವಾಗಿ ಹಾಸನ ಜಿಲ್ಲೆಯಲ್ಲಿ ಹೃದಯಘಾತಗಳ ಸಂಖ್ಯೆ ಹೆಚ್ಚಳವಾಗಿದೆ ಎಂಬ ಆತಂಕ ಜನರಲ್ಲಿ ಮೂಡಿದೆ. ಇದು ತಪ್ಪು ಗ್ರಹಿಕೆ. ವಾಸ್ತವವಾಗಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಸರಾಸರಿ ಪ್ರಮಾಣದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಶೇ.5ರಿಂದ 6ರಷ್ಟು ಪ್ರಕರಣಗಳು ಹೃದಯಾಘಾತಕ್ಕೆ ಸಂಬಂಧಿಸಿದವು. ಈ ವರ್ಷವು ಇಷ್ಟೇ ಪ್ರಮಾಣದಲ್ಲಿ ಇದೆ ಎಂದು ಹೇಳಿದರು.

ಬದಲಾದ ಜೀವನಶೈಲಿ, ಅಧಿಕ ಒತ್ತಡ, ಬೊಜ್ಜು, ಮದ್ಯಪಾನ, ಧೂಮಪಾನ, ಡ್ರಗ್ಸ್ ಸೇವನೆ, ಕುಟುಂಬದ ಹಿನ್ನಲೆ ಇತ್ಯಾದಿ ಕಾರಣಗಳಿಂದ ಹೃದಯಘಾತಗಳು ಸಂಭವಿಸಿವೆ. ಯಾವುದೋ ಒಂದು ಪ್ರಕರಣವನ್ನು ಆಧಾರವಾಗಿಟ್ಟುಕೊಂಡು ಜನತೆ ಆತಂಕಕ್ಕೆ ಒಳಗಾಗಬಾರದು ಎಂದು ಸಲಹೆ ನೀಡಿದರು.

ಕೋವಿಡ್ ನಂತರ ಹೃದಯಘಾತ ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬ ಗುಮಾನಿಯೂ ಇದೆ. ವಾಸ್ತವವಾಗಿ ಇದಕ್ಕೂ ಅದಕ್ಕೂ ಸಂಬಂಧವೇ ಇಲ್ಲ. ಪ್ರತಿದಿನ ವ್ಯಾಯಾಮ, ಪ್ರಾಣಯಾಮ, ಸರಿಯಾದ ಸಮಯಕ್ಕೆ ನಿದ್ದೆ, ಒತ್ತಡ ಇಲ್ಲದಿರುವುದು, ಖಿನ್ನತೆ ಒಳಗಾಗದೆ ಸಮತೋಲನ ಕಾಯ್ದುಕೊಂಡರೆ ಯಾವುದೇ ಆರೋಗ್ಯ ಸಮಸ್ಯೆಗಳು ಬರುವುದಿಲ್ಲ ಎಂದು ಪಾಟೀಲ್ ಸಲಹೆ ಕೊಟ್ಟರು.

ಆಂದೋಲನ ಡೆಸ್ಕ್

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

1 hour ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

2 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

2 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

2 hours ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

2 hours ago

ಮ.ಬೆಟ್ಟ | ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…

4 hours ago