ಮೈಸೂರು: ಸಂವಿಧಾನ ಜಾರಿಯಾದಾಗಿನಿಂದ ದೇಶದಲ್ಲಿ ರಾಜಾಡಳಿತ ಇಲ್ಲ. ಸಂವಿಧಾನ ಜಾರಿಯಾದ ದಿನದಿಂದ ದೇಶದಲ್ಲಿ ರಾಜ, ಮಹಾರಾಜ ಎಂಬ ಪರಿಕಲ್ಪನೆ ಇಲ್ಲ. ಯದುವೀರ್ ಪ್ರಜಾ ಪ್ರತಿನಿಧಿಯಾಗಲು ಬಂದಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಸಿಎಂ ಹೇಳಿಕೆ ಹುಳುಕು ಅನ್ನಿಸುತ್ತಿಲ್ಲ. ಇದರಲ್ಲಿ ಹುಳುಕು ಹುಡುಕುತ್ತಿರುವುದು ತಪ್ಪು ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.
ಆ ಮೂಲಕ ಸಿಎಂ ಸಿದ್ದರಾಮಯ್ಯ ಅವರು ರಾಜ ಯಾರು? ಎಂದು ನೀಡಿದ ಹೇಳಿಕೆಯನ್ನು ಸಂಸದ ಪ್ರತಾಪ್ ಸಿಂಹ ಸಮರ್ಥಿಸಿಕೊಂಡಿದ್ದಾರೆ.
ಈಗ ದೇಶದಲ್ಲಿ ರಾಜಾಡಳಿತ ಇಲ್ಲ. ಖಾಸಗಿ ದರ್ಬಾರ್ ವೇಳೆ ಮಾತ್ರ ರಾಜರು ಅಲ್ಲಿಗೆ ಸೀಮಿತವಾಗಿರುತ್ತಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಸೈದ್ಧಾಂತಿಕವಾಗಿ ವಿರೋಧಿಸುತ್ತೇನೆ. ಆದರೆ ಯದುವೀರ್ ಬಗ್ಗೆ ನೀಡಿರುವ ಹೇಳಿಕೆ ವಿಚಾರದಲ್ಲಿ ನನ್ನ ಸಹಮತವಿದೆ ಎಂದಿದ್ದಾರೆ.
ಯದುವೀರ್ ಅವರನ್ನು ಈಗ ರಾಜ ಎಂದು ಕರೆಯುತ್ತಾರಾ ಇಲ್ಲಾ ಜನ ಪ್ರತಿನಿಧಿ ಎಂದು ಕರೆಯುತ್ತಾರಾ? ಎಂದು ಪ್ರಶ್ನಿಸಿದ ಸಿಂಹ ಜನ ಪ್ರತಿನಿಧಿಯಾಗಿ ರಾಜಕೀಯಕ್ಕೆ ಯದುವೀರ್ ಬಂದಿದ್ದು, ಸಿಎಂ ಹೇಳಿಕೆಯಲ್ಲಿ ತಪ್ಪಿಲ್ಲ ಎಂದು ಪ್ರತಾಪ್ ಸಿಂಹ ವಿವರಿಸಿದರು.
ಎಂಪಿ ಅಭ್ಯರ್ಥಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹತ್ತು ವರ್ಷ ಅಧಿಕಾರ ನೀಡಿ, ಈಗ ಬದಲಾಯಿಸಿದ್ದೀರಿ ಇದನ್ನು ನಾನು ಒಪ್ಪುತ್ತೇನೆ. ಆದರೆ ಬೇರೆಯವರ ರೀತಿ ಟಿಕೆಟ್ ಮಿಸ್ ಆಯಿತು ಎಂದು ಪಾರ್ಕ್ನಲ್ಲಿ ಕುಳಿತು ತಮಟೆ ಬಾರಿಸಿಲ್ಲ ಎಂದು ರಾಮದಾಸ್ ಕಾಲೆಳೆದರು.
ಮುಂದುವರಿದು, ಮಹಾರಾಜರೇ ನೀವು ಕೈ ಮುಗಿದುಕೊಂಡು ಹೋಗಿ ಸಾಕು. ನಿಮ್ಮ ಎಂಪಿ ಹತ್ತು ವರ್ಷದಲ್ಲಿ ಬಹಳ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅಭೀವೃದ್ಧಿ ಕೆಲಸಕ್ಕೆ ಜನರು ಮತ ಹಾಕ್ತೀವಿ ಎಂದು ಹೇಳುತ್ತಾರೆ. ನೀವು ಗೆಲ್ಲಲ್ಲು ಯಾರ ನಾಮ ಬಲವೂ ಬೇಡ ಎಂದು ವೇದಿಕೆ ಮೇಲೆಯೇ ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದರು.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…