ಮೈಸೂರು: ಸಂವಿಧಾನ ಜಾರಿಯಾದಾಗಿನಿಂದ ದೇಶದಲ್ಲಿ ರಾಜಾಡಳಿತ ಇಲ್ಲ. ಸಂವಿಧಾನ ಜಾರಿಯಾದ ದಿನದಿಂದ ದೇಶದಲ್ಲಿ ರಾಜ, ಮಹಾರಾಜ ಎಂಬ ಪರಿಕಲ್ಪನೆ ಇಲ್ಲ. ಯದುವೀರ್ ಪ್ರಜಾ ಪ್ರತಿನಿಧಿಯಾಗಲು ಬಂದಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಸಿಎಂ ಹೇಳಿಕೆ ಹುಳುಕು ಅನ್ನಿಸುತ್ತಿಲ್ಲ. ಇದರಲ್ಲಿ ಹುಳುಕು ಹುಡುಕುತ್ತಿರುವುದು ತಪ್ಪು ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.
ಆ ಮೂಲಕ ಸಿಎಂ ಸಿದ್ದರಾಮಯ್ಯ ಅವರು ರಾಜ ಯಾರು? ಎಂದು ನೀಡಿದ ಹೇಳಿಕೆಯನ್ನು ಸಂಸದ ಪ್ರತಾಪ್ ಸಿಂಹ ಸಮರ್ಥಿಸಿಕೊಂಡಿದ್ದಾರೆ.
ಈಗ ದೇಶದಲ್ಲಿ ರಾಜಾಡಳಿತ ಇಲ್ಲ. ಖಾಸಗಿ ದರ್ಬಾರ್ ವೇಳೆ ಮಾತ್ರ ರಾಜರು ಅಲ್ಲಿಗೆ ಸೀಮಿತವಾಗಿರುತ್ತಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಸೈದ್ಧಾಂತಿಕವಾಗಿ ವಿರೋಧಿಸುತ್ತೇನೆ. ಆದರೆ ಯದುವೀರ್ ಬಗ್ಗೆ ನೀಡಿರುವ ಹೇಳಿಕೆ ವಿಚಾರದಲ್ಲಿ ನನ್ನ ಸಹಮತವಿದೆ ಎಂದಿದ್ದಾರೆ.
ಯದುವೀರ್ ಅವರನ್ನು ಈಗ ರಾಜ ಎಂದು ಕರೆಯುತ್ತಾರಾ ಇಲ್ಲಾ ಜನ ಪ್ರತಿನಿಧಿ ಎಂದು ಕರೆಯುತ್ತಾರಾ? ಎಂದು ಪ್ರಶ್ನಿಸಿದ ಸಿಂಹ ಜನ ಪ್ರತಿನಿಧಿಯಾಗಿ ರಾಜಕೀಯಕ್ಕೆ ಯದುವೀರ್ ಬಂದಿದ್ದು, ಸಿಎಂ ಹೇಳಿಕೆಯಲ್ಲಿ ತಪ್ಪಿಲ್ಲ ಎಂದು ಪ್ರತಾಪ್ ಸಿಂಹ ವಿವರಿಸಿದರು.
ಎಂಪಿ ಅಭ್ಯರ್ಥಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹತ್ತು ವರ್ಷ ಅಧಿಕಾರ ನೀಡಿ, ಈಗ ಬದಲಾಯಿಸಿದ್ದೀರಿ ಇದನ್ನು ನಾನು ಒಪ್ಪುತ್ತೇನೆ. ಆದರೆ ಬೇರೆಯವರ ರೀತಿ ಟಿಕೆಟ್ ಮಿಸ್ ಆಯಿತು ಎಂದು ಪಾರ್ಕ್ನಲ್ಲಿ ಕುಳಿತು ತಮಟೆ ಬಾರಿಸಿಲ್ಲ ಎಂದು ರಾಮದಾಸ್ ಕಾಲೆಳೆದರು.
ಮುಂದುವರಿದು, ಮಹಾರಾಜರೇ ನೀವು ಕೈ ಮುಗಿದುಕೊಂಡು ಹೋಗಿ ಸಾಕು. ನಿಮ್ಮ ಎಂಪಿ ಹತ್ತು ವರ್ಷದಲ್ಲಿ ಬಹಳ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅಭೀವೃದ್ಧಿ ಕೆಲಸಕ್ಕೆ ಜನರು ಮತ ಹಾಕ್ತೀವಿ ಎಂದು ಹೇಳುತ್ತಾರೆ. ನೀವು ಗೆಲ್ಲಲ್ಲು ಯಾರ ನಾಮ ಬಲವೂ ಬೇಡ ಎಂದು ವೇದಿಕೆ ಮೇಲೆಯೇ ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…