Mysore
21
clear sky

Social Media

ಶುಕ್ರವಾರ, 20 ಮಾರ್ಚ್ 2026
Light
Dark

ಯಾವ ನವೆಂಬರ್‌ ಕ್ರಾಂತಿನೂ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಕೊಪ್ಪಳ: ಯಾವ ನವೆಂಬರ್‌ ಕ್ರಾಂತಿನೂ ಇಲ್ಲ, ಬರೀ ಭ್ರಾಂತಿಯಷ್ಟೇ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿರುವ ಹಿನ್ನೆಲೆಯಲ್ಲಿಂದು ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನವೆಂಬರ್‌ ಕ್ರಾಂತಿ ಗಿಂತ ಏನೂ ಇಲ್ಲ. ಇದೆಲ್ಲಾ ಬರೀ ಭ್ರಾಂತಿಯಷ್ಟೇ ಎಂದರು.

ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಐದು ವರ್ಷವೂ ನಾನೇ ಸಿಎಂ ಆಗಿರುತ್ತೇನೆ ಎಂಬ ಸಂದೇಶ ರವಾನೆ ಮಾಡಿದ್ದು, ನವೆಂಬರ್‌ನಲ್ಲಿ ಕ್ರಾಂತಿ ಆಗುತ್ತೆ ಎನ್ನುವವರ ಬಾಯಿ ಮುಚ್ಚಿಸಿದ್ದಾರೆ.

Tags:
error: Content is protected !!