ರಾಜ್ಯ

ಮತಗಳ್ಳತನದ ಹೋರಾಟದಲ್ಲಿ ರಾಜಕೀಯ ಉದ್ದೇಶವಿಲ್ಲ : ಡಿ.ಕೆ.ಶಿವಕುಮಾರ್

ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ದಿಲ್ಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.

ವೋಟ್ ಚೋರಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಾವು ಮತಕಳ್ಳತನ ವಿರುದ್ಧದ ಹೋರಾಟ ಆರಂಭಿಸಿದ್ದೆವು. ಈಗ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ. ಈ ದೇಶದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸಬೇಕು ಎಂಬ ಸಂದೇಶ ನೀಡಲಾಗುತ್ತಿದೆ. ದೇಶದ ಚುನಾವಣೆಗಳು ಈಗ ನ್ಯಾಯಸಮ್ಮತವಾಗಿಲ್ಲ. ಮತಕಳ್ಳತನ ಮಾಡಲಾಗುತ್ತಿದೆ. ಇದಕ್ಕೆ ಸಾವಿರಾರು ಉದಾಹರಣೆಗಳಿವೆ. ರಾಹುಲ್ ಗಾಂಧಿ ಅವರು ಈ ವಿಚಾರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಿದ್ದಾರೆ. ಇನ್ನು ಹಲವು ಬಾರಿ ಮಾಧ್ಯಮಗೋಷ್ಠಿ ಮೂಲಕ ದಾಖಲೆಗಳನ್ನು ಬಹಿರಂಗಗೊಳಿಸಿದ್ದಾರೆ. ಇಷ್ಟಾದರೂ ಚುನಾವಣಾ ಆಯೋಗದಿಂದ ಸರಿಯಾದ ಉತ್ತರ ಸಿಗುತ್ತಿಲ್ಲ. ಹೀಗಾಗಿ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಬಗ್ಗೆ ಜನರಿಗೆ ಅರಿವು ಮೂಡಿಸಲು ನಾವು ಬೀದಿಗಿಳಿದು ಹೋರಾಟ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ರಾಜ್ಯದ ಸುಮಾರು 4 ಸಾವಿರ ಕಾರ್ಯಕರ್ತರು ಭಾಗಿ

“ದೆಹಲಿಯ ಪ್ರತಿಭಟನೆಗೆ ರಾಜ್ಯದಿಂದ ಆಗಮಿಸುವ 1500 ಕಾರ್ಯಕರ್ತರಿಗೆ ನಾವು ವಾಸ್ತವ್ಯದ ವ್ಯವಸ್ಥೆ ಕಲ್ಪಿಸಿದ್ದೇವೆ. ಸುಮಾರು 2 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ನಾಯಕರು ತಮ್ಮ ವ್ಯವಸ್ಥೆ ತಾವೇ ಮಾಡಿಕೊಂಡಿದ್ದಾರೆ. ಕೆಲವರು ವಿಮಾನ, ಮತ್ತೆ ಕೆಲವರು ರೈಲಲ್ಲಿ ಆಗಮಿಸಿದ್ದಾರೆ. ಸುಮಾರು 3500 ರಿಂದ 4000 ಜನ ಪ್ರತಿಭಟನೆಗೆ ಬಂದಿದ್ದಾರೆ. ಮತಕಳ್ಳತನ ವಿರುದ್ಧ ರಾಜ್ಯದಲ್ಲಿ ನಡೆದ ಸಹಿಸಂಗ್ರಹ ಅಭಿಯಾನದಲ್ಲಿ 1.42 ಕೋಟಿ ಸಹಿ ಸಂಗ್ರಹ ಮಾಡಲಾಗಿದೆ. ಇಲ್ಲಿ ಸೇರಿರುವ ನಾಯಕರು, ಕಾರ್ಯಕರ್ತರೇ ಈ ಹೋರಾಟದ ಉತ್ಸಾಹಕ್ಕೆ ಸಾಕ್ಷಿ. ಇಲ್ಲಿರುವ ಪ್ರತಿಯೊಬ್ಬರೂ ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಉಳಿಸಿಕೊಳ್ಳಬೇಕು, ಮತದಾನದ ಹಕ್ಕು ಕಾಪಾಡಬೇಕು ಎಂದು ಬಂದಿದ್ದಾರೆ” ಎಂದು ತಿಳಿಸಿದರು.

“ದೆಹಲಿಗೆ ಬರುವ ವಾಹನಗಳನ್ನು ಬಿಜೆಪಿ ಸರ್ಕಾರ ತಡೆ ಹಿಡಿದಿದೆಯಂತೆ. ವಾಹನ ದೆಹಲಿಯೊಳಗೆ ಪ್ರವೇಶ ಮಾಡಲು ಅವಕಾಶ ನೀಡುತ್ತಿಲ್ಲ. ಯಾಕೆ ಈ ರೀತಿ ಮಾಡುತ್ತಿದ್ದಾರೆ ತಿಳಿಯುತ್ತಿಲ್ಲ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಯಾಕೆ ಗಾಬರಿಯಾಗುತ್ತಿದೆ ಗೊತ್ತಿಲ್ಲ. ನಮ್ಮ ಧ್ವನಿಯನ್ನು ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ:-10 ವರ್ಷದ ಪ್ರೀತಿಗೆ ಮೋಸ,ಹಣವೂ ದೋಖಾ : ಬೇರೆ ಮದುವೆಗೆ ಮುಂದಾದ ಯುವಕನ ಮನೆಮುಂದೆ ಪ್ರಿಯತಮೆ ಗಲಾಟೆ

ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಕಚೇರಿಗೆ ಬರುವಂತೆ ನಮಗೆ ಆಹ್ವಾನ ನೀಡಿದ್ದಾರೆ. ಸಂಚಾರ ದಟ್ಟಣೆ ಹಿನ್ನೆಲೆಯಲ್ಲಿ ಅಲ್ಲಿಂದ ನಾವು ಬಸ್ ಮೂಲಕ ರಾಮಲೀಲಾ ಮೈದಾನಕ್ಕೆ ತೆರಳುತ್ತೇವೆ. ಈ ಪ್ರತಿಭಟನೆಗಾಗಿ ನಾವು ನಮ್ಮ ಕಾರ್ಯಕರ್ತರಿಗೆ ವಿಶೇಷವಾಗಿ ಚಳಿ ವಾತಾವರಣಕ್ಕೆ ಅನುಕೂಲವಾಗುವಂತೆ ಟೀ ಶರ್ಟ್ ಮಾಡಿಸಲಾಗಿದೆ” ಎಂದು ತಿಳಿಸಿದರು.

ಸೋಲು, ಗೆಲುವಿಗೆ ಕಾಂಗ್ರೆಸಿಗರು ಯೋಚಿಸುವುದಿಲ್ಲ:

ಸೋಲಿನ ಹತಾಶೆಯಿಂದ ಕಾಂಗ್ರೆಸ್ ಈ ರೀತಿ ಸಮಾವೇಶ ಮಾಡುತ್ತಿದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ತಮ್ಮ ಖುಷಿಗೆ ಏನು ಬೇಕಾದರೂ ಮಾತನಾಡುತ್ತಾರೆ. ನಾವು ಕಾಂಗ್ರೆಸಿಗರು ಸೋಲು, ಗೆಲುವಿನ ಬಗ್ಗೆ ಯೋಚನೆ ಮಾಡುವುದಿಲ್ಲ. ಈ ದೇಶಕ್ಕೆ ಸ್ವಾತಂತ್ರ್ಯ ಹಾಗೂ ಸಂವಿಧಾನ ತಂದು ಕೊಟ್ಟಾಗ ನಮ್ಮ ಹಿರಿಯರು ಸಾಕಷ್ಟು ಪ್ರಾಣತ್ಯಾಗ ಮಾಡಿದ್ದಾರೆ. ಈ ದೇಶದ ಆರ್ಥಿಕ ತಜ್ಞನಿಗೆ ಸೋನಿಯಾ ಗಾಂಧಿ ಅವರು ಅಧಿಕಾರ ತ್ಯಾಗ ಮಾಡಿದರು. ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರು ದೇಶಕ್ಕಾಗಿ ಪ್ರಾಣವನ್ನೇ ಅರ್ಪಿಸಿದರು. ಜವಾಹರ್ ಲಾಲ್ ನೆಹರೂ, ಗಾಂಧಿಜಿ ಸೇರಿದಂತೆ ಅನೇಕ ಮಹನೀಯರು ಜೈಲುವಾಸ ಅನುಭವಿಸಿದರು. ನೂರು ವರ್ಷಗಳ ಹಿಂದೆ ಮಹಾತ್ಮಾ ಗಾಂಧಿ ಅವರು ದೇಶದ ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿದರು. ಇಂದು ಪಕ್ಷ ಕಷ್ಟಕಾಲದಲ್ಲಿರುವಾಗ ಮಲ್ಲಿಕಾರ್ಜುನ ಖರ್ಗೆ ಅವರು ಪಕ್ಷದ ಅಧ್ಯಕ್ಷರಾಗಿದ್ದಾರೆ” ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

3 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

16 hours ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

17 hours ago

ಹಾಸನದಲ್ಲಿ ಮುಂದುವರಿದ ಮಳೆಯ ಅಬ್ಬರ

ಹಾಸನ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರೀ ಗಾಳಿಯೊಂದಿಗೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593…

18 hours ago

ರಾಜ್ಯದಲ್ಲಿ ಭಾರೀ ಮಳೆ ಎಚ್ಚರಿಕೆ: 7 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಮಲೆನಾಡು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ ಕೆಲವು ದಿನಗಳು ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…

18 hours ago

ವಯನಾಡಿನಲ್ಲಿ ಭೂಕುಸಿತ: ನಾಪತ್ತೆಯಾದ ಐವರ ಶೋಧ ಕಾರ್ಯಕ್ಕೆ ಮಳೆ ಅಡ್ಡಿ

ವಯನಾಡು: ಬೆಳಿಗ್ಗೆಯಿಂದಲೇ ವಯನಾಡಿನಲ್ಲಿ ಮಳೆಯ ನಡುವೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಪತ್ತೆಯಾಗಿರುವ ಐವರಿಗೆ ಶೋಧ ಕಾರ್ಯ ಕಾರ್ಯ ನಡೆಯುತ್ತಿದೆ. ಮೆಪ್ಪಾಡಿ…

19 hours ago