ರಾಜ್ಯ

ಧರ್ಮಸ್ಥಳ ಪ್ರಕರಣದಲ್ಲಿ ಯಾವುದೇ ರಾಜಕೀಯ ಇಲ್ಲ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಧರ್ಮಸ್ಥಳ ಭಾಗದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಹಾಗೂ ಅಸಹಜ ಸಾವಿನ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ದಳದ ಸದಸ್ಯರಲ್ಲಿ ಯಾರಾದರೂ ಹಿಂದೆ ಸರಿಯಲು ಬಯಸಿದರೆ ರಾಜ್ಯ ಸರ್ಕಾರ ಬೇರೆಯವರನ್ನು ನೇಮಿಸಲು ಸಿದ್ಧವಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಮಿತಿಯನ್ನು ರಚಿಸಿದೆ. ಅದರ ಮುಖ್ಯಸ್ಥರಾದ ಡಿಜಿಪಿ ಪ್ರಣವ್ ಮೊಹಂತಿ ನಾಳೆ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಧರ್ಮಸ್ಥಳದ ಪೊಲೀಸ್ ಠಾಣೆಯಲ್ಲಿ ಲಭ್ಯ ಇರುವ ದಾಖಲಾತಿಗಳನ್ನು ಆಧರಿಸಿ ತನಿಖೆಯನ್ನು ಆರಂಭಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರು ಈಗಾಗಲೇ ಎಸ್‍ಐಟಿ ಸಮಿತಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಗೂ ಸೂಚನೆ ನೀಡಿದ್ದಾರೆ ಎಂದರು.

ಸದ್ಯಕ್ಕೆ ಎಸ್‍ಐಟಿಯಲ್ಲಿ ಆದೇಶದಲ್ಲಿ ಉಲ್ಲೇಖಿಸಿರುವಂತೆ ನಾಲ್ಕು ಮಂದಿ ಐಪಿಎಸ್ ಅಧಿಕಾರಿಗಳು ಇರುತ್ತಾರೆ. ಒಂದು ವೇಳೆ ಯಾರಾದರೂ ಹಿಂದೆ ಸರಿಯಲು ಬಯಸಿದರೆ ಅವರನ್ನು ಪೊಲೀಸ್ ಮಹಾ ನಿರ್ದೇಶಕರು ಬದಲಾಯಿಸುತ್ತಾರೆ. ನಿನ್ನೆ ತಮಗೆ ಯಾರೋ ಮಾಹಿತಿ ನೀಡಿ ಕೆಲ ಅಧಿಕಾರಿಗಳು ಹಿಂದೆ ಸರಿಯುವ ಸಾಧ್ಯತೆಯಿದೆ ಎಂದಿದ್ದರು. ಮಾಧ್ಯಮದಲ್ಲೂ ಇದು ವರದಿಯಾಗಿತ್ತು. ಯಾವುದೇ ಕಾರಣಕ್ಕಾದರೂ ಹಿಂದೆ ಸರಿಯಲು ಮುಂದೆ ಬಂದರೆ ಆ ಸ್ಥಾನಕ್ಕೆ ಬೇರೆಯವರನ್ನು ನೇಮಿಸಲು ಎಲ್ಲಾ ಅವಕಾಶಗಳಿವೆ. ಅದೇನು ದೊಡ್ಡ ಸಮಸ್ಯೆಯಲ್ಲ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

31 mins ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

1 hour ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

2 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

3 hours ago

ವಿಧಾನಸಭೆಯಲ್ಲಿ ಹನೂರು ಎನ್‌ಕೌಂಟರ್‌ ಸದ್ದು: ಗದ್ದಲ ಕೋಲಾಹಲ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್‌ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್‌,…

7 hours ago

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

9 hours ago