Dharmasthala dead bodies burried case
ಬೆಂಗಳೂರು: ಧರ್ಮಸ್ಥಳ ಭಾಗದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ ಹಾಗೂ ಅಸಹಜ ಸಾವಿನ ಪ್ರಕರಣಗಳ ತನಿಖೆಗೆ ರಚಿಸಲಾಗಿರುವ ವಿಶೇಷ ದಳದ ಸದಸ್ಯರಲ್ಲಿ ಯಾರಾದರೂ ಹಿಂದೆ ಸರಿಯಲು ಬಯಸಿದರೆ ರಾಜ್ಯ ಸರ್ಕಾರ ಬೇರೆಯವರನ್ನು ನೇಮಿಸಲು ಸಿದ್ಧವಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಮಿತಿಯನ್ನು ರಚಿಸಿದೆ. ಅದರ ಮುಖ್ಯಸ್ಥರಾದ ಡಿಜಿಪಿ ಪ್ರಣವ್ ಮೊಹಂತಿ ನಾಳೆ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದಾರೆ. ಧರ್ಮಸ್ಥಳದ ಪೊಲೀಸ್ ಠಾಣೆಯಲ್ಲಿ ಲಭ್ಯ ಇರುವ ದಾಖಲಾತಿಗಳನ್ನು ಆಧರಿಸಿ ತನಿಖೆಯನ್ನು ಆರಂಭಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರು ಈಗಾಗಲೇ ಎಸ್ಐಟಿ ಸಮಿತಿಗೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಗೂ ಸೂಚನೆ ನೀಡಿದ್ದಾರೆ ಎಂದರು.
ಸದ್ಯಕ್ಕೆ ಎಸ್ಐಟಿಯಲ್ಲಿ ಆದೇಶದಲ್ಲಿ ಉಲ್ಲೇಖಿಸಿರುವಂತೆ ನಾಲ್ಕು ಮಂದಿ ಐಪಿಎಸ್ ಅಧಿಕಾರಿಗಳು ಇರುತ್ತಾರೆ. ಒಂದು ವೇಳೆ ಯಾರಾದರೂ ಹಿಂದೆ ಸರಿಯಲು ಬಯಸಿದರೆ ಅವರನ್ನು ಪೊಲೀಸ್ ಮಹಾ ನಿರ್ದೇಶಕರು ಬದಲಾಯಿಸುತ್ತಾರೆ. ನಿನ್ನೆ ತಮಗೆ ಯಾರೋ ಮಾಹಿತಿ ನೀಡಿ ಕೆಲ ಅಧಿಕಾರಿಗಳು ಹಿಂದೆ ಸರಿಯುವ ಸಾಧ್ಯತೆಯಿದೆ ಎಂದಿದ್ದರು. ಮಾಧ್ಯಮದಲ್ಲೂ ಇದು ವರದಿಯಾಗಿತ್ತು. ಯಾವುದೇ ಕಾರಣಕ್ಕಾದರೂ ಹಿಂದೆ ಸರಿಯಲು ಮುಂದೆ ಬಂದರೆ ಆ ಸ್ಥಾನಕ್ಕೆ ಬೇರೆಯವರನ್ನು ನೇಮಿಸಲು ಎಲ್ಲಾ ಅವಕಾಶಗಳಿವೆ. ಅದೇನು ದೊಡ್ಡ ಸಮಸ್ಯೆಯಲ್ಲ ಎಂದು ಹೇಳಿದರು.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…