ರಾಜ್ಯ

ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು: ಗೃಹ ಬಳಕೆಯ ಗ್ಯಾಸ್‌‍ ಸಿಲಿಂಡರ್‌ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್‌.ಮುನಿಯಪ್ಪ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಇರಾನ್‌ ಮತ್ತು ಇಸ್ರೇಲ್‌ ದೇಶಗಳ ಮಧ್ಯೆ ಯುದ್ದ ನಡೆಯುತ್ತಿದ್ದು, ಅರಬ್‌ ರಾಷ್ಟ್ರಗಳಾದ ಯುಎಸ್‌‍ಎ, ಗಲ್ಫ್, ರಷ್ಯಾದ ದೇಶಗಳಿಂದ ನಮ ದೇಶಕ್ಕೆ ಅನಿಲ ಉತ್ಪನ್ನಗಳನ್ನು ನಾವು ಆಮದು ಮಾಡಿಕೊಳ್ಳುತ್ತಿದ್ದು ಅಂತರಾಷ್ಟ್ರೀಯ ಮಟ್ಟದಲ್ಲಿ ಯುದ್ಧದ ಕಾರಣದಿಂದ ಅನಿಲದ ವೆಸೆಲ್‌ (ಶಿಪ್‌ಗಳಿಗೆ) ಹಾನಿ ಉಂಟಾದ ಹಿನ್ನಲೆಯಲ್ಲಿ ನಮಗೆ ಅನಿಲ ಸಮಸ್ಯೆ ಉಂಟಾಗಿದ್ದು ಗ್ರಾಹಕರು ಯಾವುದೇ ಆತಂಕಕ್ಕೆ ಒಳಗಾಗಬಾರದು ಎಂದರು.‌

ಸಾಮಾನ್ಯವಾಗಿ ಜನರು ಉಪಯೋಗಿಸುವ ಡೊಮೆಸ್ಟಿಕ್‌ ಗ್ಯಾಸ್‌‍ ಮತ್ತು ಕಮರ್ಷಿಯಲ್‌ ಗ್ಯಾಸ್‌‍ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ. ಸುಮಾರು 1000 ಮೆಟ್ರಿಕ್‌ ಟನ್‌ ಅಂದರೆ ಒಂದು ದಿನಕ್ಕೆ ಸುಮಾರು 50,000 ಕಮರ್ಷಿಯಲ್‌ ಸಿಲಿಂಡರ್ಸ್‌ (19 ಕೆಜಿ) ಬೇಕಾಗುತ್ತದೆ. ಡೊಮೆಸ್ಟಿಕ್‌ ಬಳಕೆಗೆ ಸುಮಾರು 5,000 ಮೆಟ್ರಿಕ್‌ ಟನ್‌ ಅಂದ್ರೆ ದಿನಕ್ಕೆ ಸುಮಾರು 3,50,000 ಸಿಲಿಂಡರ್ಸ್‌ (14.2 ಕೆಜಿ) ಬೇಕಾಗುತ್ತದೆ. ಇದು ಕರ್ನಾಟಕ ರಾಜ್ಯದ ಪ್ರತಿ ದಿನದ ಅವಶ್ಯಕತೆಯಾಗಿದೆ.

ಭಾರತದಲ್ಲಿ ಸುಮಾರು ಶೇ.30ರಷ್ಟು ಮಾತ್ರ ಉತ್ಪಾದನೆ ಇದೆ. ಉಳಿದ ಶೇ. 60 ರಿಂದ 70ರಷ್ಟು ಆಮದು ಮಾಡಿಕೊಳ್ತಾ ಇದ್ದೇವೆ. ಅಮೇರಿಕಾ, ಗಲ್ಫ್ ಅರೇಬಿಯನ್‌ ಮತ್ತು ರಷ್ಯಾ ದೇಶಗಳಿಂದ ಆಮದು ಬರುತ್ತದೆ. ‌  ಕೇಂದ್ರ ಸರ್ಕಾರದ ಸೂಚನೆಯಂತೆ ಒಂದು ಕುಟುಂಬದ ಬಳಕೆಗೆ 25 ದಿನಕ್ಕೆ ಒಂದು ಸಿಲಿಂಡರ್‌ ನೀಡಲಾಗುತ್ತದೆ ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

10 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

10 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

10 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

10 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

10 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

13 hours ago