ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಂದಾಯಿತ ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಮಾಡಲಾಗುತ್ತಿದೆ. ಪ್ರತಿದಿನ 3 ಸಾವಿರ ಸಿಲಿಂಡರ್ ಬಳಕೆ ಮಾಡಲಾಗುತ್ತಿದೆ. ಅಷ್ಟೂ ಸಿಲಿಂಡರ್ಗಳನ್ನು ಒದಗಿಸಲಾಗುತ್ತಿದೆ. ಹೀಗಾಗಿ ಆಟೋ ರಿಕ್ಷಾದವರು ವಿನಾಕಾರಣ ಆತಂಕಕ್ಕೆ ಒಳಗಾಗಬಾರದು ಎಂದು ಅವರು ಮನವಿ ಮಾಡಿದರು.
ಎಚ್ಪಿಸಿಎಲ್, ಬಿಪಿಸಿಎಲ್, ಐಪಿಸಿಎಲ್ ಸಂಸ್ಥೆಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಆದರೆ ಖಾಸಗಿ ಅನಿಲ ಪೂರೈಕೆ ಏಜೆನ್ಸಿಗಳು ದರವನ್ನು ಹೆಚ್ಚಿಸಿರುವುದರಿಂದ ಗೊಂದಲ ಉಂಟಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ಖಾಸಗಿ ಏಜೆನ್ಸಿಗಳು ದರ ಹೆಚ್ಚಳ ಮಾಡದಂತೆ ನಿರ್ದೇಶನ ನೀಡಬೇಕು ಎಂದು ಕೋರಲಾಗಿದೆ ಎಂದರು.
ಕೇಂದ್ರ ಸರ್ಕಾರ ನಿಗದಿಪಡಿಸಿರುವ ದರದಲ್ಲೆ ಅನಿಲ ಹಾಗೂ ತೈಲವನ್ನು ನೀಡಬೇಕು ಎಂದ ಅವರು, ಇಸ್ರೇಲ್-ಇರಾನ್ ನಡುವಿನ ಯುದ್ಧ ಪರಿಸ್ಥಿತಿಯಿಂದಾಗಿ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೆಲವೊಂದು ವ್ಯತ್ಯಯಗಳಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಕೋರಿದರು.
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಕೋಳಿ ಫಾರಂ ಶೆಡ್ಗೆ ಬೆಂಕಿ ತಗುಲಿ ಸುಮಾರು 4…
ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…
ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…
ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್ಐಆರ್…
ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…
ಹೊಸದಿಲ್ಲಿ : ರೈಲು ಪ್ರಯಾಣ ಆರಂಭವಾಗುವ 8 ಗಂಟೆ ಮೊದಲು ನಿಮ್ಮ ಟಿಕೆಟ್ ರದ್ದುಪಡಿಸದಿದ್ದರೆ ಟಿಕೆಟ್ನ ಸಂಪೂರ್ಣ ಹಣ ಖೋತಾ…