ರಾಜ್ಯ

ಸಿಎನ್‌ಜಿ ಸಮಸ್ಯೆ ಇಲ್ಲ : ಸಚಿವ ಮುನಿಯಪ್ಪ

ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೋಂದಾಯಿತ ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಮಾಡಲಾಗುತ್ತಿದೆ. ಪ್ರತಿದಿನ 3 ಸಾವಿರ ಸಿಲಿಂಡರ್ ಬಳಕೆ ಮಾಡಲಾಗುತ್ತಿದೆ. ಅಷ್ಟೂ ಸಿಲಿಂಡರ್‌ಗಳನ್ನು ಒದಗಿಸಲಾಗುತ್ತಿದೆ. ಹೀಗಾಗಿ ಆಟೋ ರಿಕ್ಷಾದವರು ವಿನಾಕಾರಣ ಆತಂಕಕ್ಕೆ ಒಳಗಾಗಬಾರದು ಎಂದು ಅವರು ಮನವಿ ಮಾಡಿದರು.

ಎಚ್‌ಪಿಸಿಎಲ್, ಬಿಪಿಸಿಎಲ್, ಐಪಿಸಿಎಲ್ ಸಂಸ್ಥೆಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಆದರೆ ಖಾಸಗಿ ಅನಿಲ ಪೂರೈಕೆ ಏಜೆನ್ಸಿಗಳು ದರವನ್ನು ಹೆಚ್ಚಿಸಿರುವುದರಿಂದ ಗೊಂದಲ ಉಂಟಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ಖಾಸಗಿ ಏಜೆನ್ಸಿಗಳು ದರ ಹೆಚ್ಚಳ ಮಾಡದಂತೆ ನಿರ್ದೇಶನ ನೀಡಬೇಕು ಎಂದು ಕೋರಲಾಗಿದೆ ಎಂದರು.

ಕೇಂದ್ರ ಸರ್ಕಾರ ನಿಗದಿಪಡಿಸಿರುವ ದರದಲ್ಲೆ ಅನಿಲ ಹಾಗೂ ತೈಲವನ್ನು ನೀಡಬೇಕು ಎಂದ ಅವರು, ಇಸ್ರೇಲ್-ಇರಾನ್ ನಡುವಿನ ಯುದ್ಧ ಪರಿಸ್ಥಿತಿಯಿಂದಾಗಿ ಉಂಟಾಗಿರುವ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೆಲವೊಂದು ವ್ಯತ್ಯಯಗಳಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಕೋರಿದರು.

ಆಂದೋಲನ ಡೆಸ್ಕ್

Recent Posts

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

6 hours ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

10 hours ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

10 hours ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

11 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

11 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

12 hours ago