ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಅತಿವೃಷ್ಟಿ, ಅನಾವೃಷ್ಟಿ ಸಮಸ್ಯೆಯಂತೆ ಇದು ಸಹ ಸಮಸ್ಯೆ ಅಂತಾ ತಿಳಿಯಬೇಕು. ಒಂದೂವರೆ ಲಕ್ಷ ಕಮರ್ಷಿಯಲ್ ಗ್ಯಾಸ್ ಬೇಕು. ಮೂರುವರೆ ಲಕ್ಷ ಗೃಹಬಳಕೆ ಸಿಲಿಂಡರ್ ಬೇಕಾಗುತ್ತದೆ. ನಾವು ಶೇ.75ರಷ್ಟು ಹೊರದೇಶದ ಮೇಲೆ ಡಿಪೆಂಡ್ ಆಗಿದ್ದೇವೆ ಎಂದು ಹೇಳಿದರು.
ಇನ್ನೆರಡು ದಿನದಲ್ಲಿ ಮುಂಬೈಗೆ ಗ್ಯಾಸ್ ಸಿಲಿಂಡರ್ ಬರಲಿದೆ. ಹಡಗು ಬರಲು ಬಿಟ್ಟಿರುವುದರಿಂದ ಸಮಸ್ಯೆ ಬಗೆಹರಿಯಲಿದೆ. ಎರಡು ದಿನದಲ್ಲಿ ಒಂದು ಹಡಗು 10 ದಿನದಲ್ಲಿ ಮತ್ತೊಂದು ಹಡಗು ಬರುತ್ತದೆ. ಜಿಲ್ಲಾಧಿಕಾರಿಗೂ ಸೂಚನೆ ನೀಡಲಾಗಿದೆ. ಇದರಲ್ಲಿ ಗೊಂದಲ ಬೇಡ. ನಾನು ಸಾರ್ವಜನಿಕರಲ್ಲೂ ಮನವಿ ಮಾಡುತ್ತೇನೆ ಅಗತ್ಯಕ್ಕೆ ಎಷ್ಟು ಬೇಕೋ ಅಷ್ಟು ಮಾತ್ರ ಗ್ಯಾಸ್ ಬುಕ್ ಮಾಡಿಕೊಳ್ಳಿ. ಹೋಟೆಲ್, ಆಸ್ಪತ್ರೆ, ಶಾಲೆಗಳಿಗೆ ಕಮರ್ಷಿಯಲ್ ಗ್ಯಾಸ್ ಬೇಕಾಗುತ್ತದೆ ಎಂದು ತಿಳಿಸಿದರು.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…