ರಾಜ್ಯ

ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ| ಸಿದ್ಧಾಂತ-ನಾಯಕತ್ವ ಒಪ್ಪಿ ಬರುವವರಿಗೆ ಪಕ್ಷಕ್ಕೆ ಸ್ವಾಗತ: ಸಿಎಂ

ಬೆಂಗಳೂರು : ‘ಕಾಂಗ್ರೆಸ್ ಪಕ್ಷದ ಸಿದ್ದಾಂತವನ್ನು, ನಾಯಕತ್ವವನ್ನು ಬೆಂಬಲಿಸಿ ಬರುವವರನ್ನು ಪಕ್ಷಕ್ಕೆ ಸ್ವಾಗತಿಸಲಾಗುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಾಂಗ್ರೆಸ್ ಆಪರೇಷನ್ ಹಸ್ತ ಕೈಗೊಳ್ಳುತ್ತಿದೆ ಎಂಬ ಆರೋಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಆಪರೇಷನ್ ಹಸ್ತ ಮಾಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಹಾಗೂ ಜೆಡಿಎಸ್ ನಿಂದ ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ಗೆ ಬರಲಿದ್ದಾರೆ’ ಎಂದರು.

ಪ್ರಧಾನಿಯವರ ಭಾಷಣ ಸುಳ್ಳಿನ ಕಂತೆ : ಈಗಿನ ಮುಖ್ಯಮಂತ್ರಿಗಳು ಎಷ್ಟು ಅವಧಿಗೆ ಮುಖ್ಯಮಂತ್ರಿಗಳಾಗಿ ಉಳಿಯಲಿದ್ದಾರೆ ಎಂಬ ಪ್ರಧಾನಿಯವರ ರಾಜಕೀಯ ಭಾಷಣದಲ್ಲಿನ ಹೇಳಿಕೆಗೆ ಪ್ರತಿಕ್ರಿಯೆ ನೀಡುತ್ತಾ, ಕೇವಲ ಆರೋಪ ಮಾಡಬೇಕೆಂಬ ಉದ್ದೇಶದಿಂದ ಆರೋಪ ಮಾಡಲಾಗುತ್ತಿದ್ದು, ಇವೆಲ್ಲವೂ ಸುಳ್ಳಿನ ಕಂತೆ ಎಂದರು.

ಬಿಜೆಪಿಯ ದಿವಾಳಿತನ : ಮಧ್ಯಪ್ರದೇಶದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕರ್ನಾಟಕವನ್ನೇ ಗುರಿ ಮಾಡಿ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಪ್ರಚಾರ ಮಾಡಿದಲ್ಲೆಲ್ಲಾ ಬಿಜೆಪಿ ಸೋತಿದೆ. ರಾಜ್ಯದಲ್ಲಿ ಇದುವರೆಗೆ ವಿರೋಧಪಕ್ಷದ ನಾಯಕರನ್ನು ಆಯ್ಕೆಮಾಡಿಲ್ಲ. ಇದು ಬಿಜೆಪಿಯ ದಿವಾಳಿಯಾಗಿರುವುದನ್ನು ಸೂಚಿಸುತ್ತದೆ ಎಂದರು.

ಬರಪರಿಹಾರ ನೀಡಿಲ್ಲ : ಸಿಎಂ ಮತ್ತು ಡಿಸಿಎಂ ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೆ ಎಂಬ ಪ್ರಧಾನಮಂತ್ರಿಗಳ ಭಾಷಣದಲ್ಲಿ ಮಾಡಿರುವ ಟೀಕೆಗೆ ಪ್ರತಿಕ್ರಿಯಿಸಿದ ಅವರು, ”40 ಪರ್ಸೆಂಟ್ ಕಮೀಷನ್ ಸರಕಾರ ಎಂಬ ಆರೋಪ ಬಿಜೆಪಿ ಸರ್ಕಾರದದ ಮೇಲಿತ್ತು. ಈ ಬಗ್ಗೆ ನಮ್ಮ ಸರ್ಕಾರ ತನಿಖೆ ಮಾಡಿಸುತ್ತಿದೆ. ದೇಶದ ಪ್ರಧಾನಿಯಾದವರು ಈ ವಿಷಯದ ಬಗ್ಗೆಯೂ ಮಾತನಾಡಬೇಕಲ್ಲವೇ? ಕೇಂದ್ರ ಸರ್ಕಾರದ ಅಧೀನದಲ್ಲಿ ಎಲ್ಲ ತನಿಖಾ ಸಂಸ್ಥೆಗಳಿವೆ , ಪುರಾವೆಗಳು, ದಾಖಲೆಗಳಿಲ್ಲದೇ ಆರೋಪ ಮಾಡಬಾರದು. ಇಂದು ಇಡೀ ದೇಶವೇ ದಿವಾಳಿಯಾಗಿದೆ.

ರಾಜ್ಯದ ವಿರುದ್ಧ ಕೇಂದ್ರ ಮಲತಾಯಿ ಧೋರಣೆಯನ್ನು ತಳೆದಿದೆ. ಬರಗಾಲದ ಪರಿಹಾರವನ್ನು ರಾಜ್ಯಕ್ಕೆ ಬಿಡುಗಡೆ ಮಾಡಿಲ್ಲ. ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಲು ಸಾಧ್ಯವೇ ಇಲ್ಲ ಎಂದು ಪ್ರಧಾನ ಮಂತ್ರಿಗಳು ಹೇಳಿದ್ದರು. ಆದರೆ ನಮ್ಮ ಸರ್ಕಾರ ಅವುಗಳನ್ನು ಸಾಧಿಸಿ ತೋರಿಸಿದೆ. ಇಂತಹ ಹೇಳಿಕೆಗಳನ್ನು ದೇಶದ ಪ್ರಧಾನ ಮಂತ್ರಿಗಳಿಂದ ಅಪೇಕ್ಷಿಸಿರಲಿಲ್ಲ. ತಮ್ಮ ರಾಜಕೀಯ ಭಾಷಣದಲ್ಲಿ ರಾಜ್ಯದ ಬಗ್ಗೆ ಟೀಕೆಗಳನ್ನು ಮಾಡುವುದು ಪ್ರಧಾನಮಂತ್ರಿಯವರಿಗೆ ಶೋಭೆ ತರುವಂಥದ್ದಲ್ಲ” ಎಂದು ಸಿದ್ದರಾಮಯ್ಯ ಹೇಳಿದರು.

andolanait

Recent Posts

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

7 mins ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

2 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

3 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

4 hours ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

4 hours ago

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

6 hours ago